ಬ್ರೇಕಿಂಗ್ ನ್ಯೂಸ್
11-06-21 02:09 pm Headline Karnataka News Network ಕರ್ನಾಟಕ
ಗದಗ, ಜೂನ್ 11; ಕೋವಿಡ್ 2ನೇ ಅಲೆಯಿಂದಾಗಿ ಸಾವಿರಾರು ಜನರು ಇದುವರೆಗೂ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕಿನ ವಿರುದ್ಧದ ಲಸಿಕೆಗೆ ಈಗ ಭಾರೀ ಬೇಡಿಕೆ ಇದೆ. ಆದರೆ ಇಲ್ಲೊಂದು ಪ್ರದೇಶದಲ್ಲಿ ಲಸಿಕೆ ಬೇಡ ಎಂದು ಜನರು ಹೇಳುತ್ತಿದ್ದಾರೆ.
ಇದು ಗದಗ ಜಿಲ್ಲೆಯ ಮುಳಗುಂದದ ಬಳಿ ಇರುವ ದಾವಲ್ ಮಲ್ಲಿಕ್ ಪ್ರದೇಶ. ಇಲ್ಲಿ ಸುಮಾರು 500 ಜನರು ವಾಸವಾಗಿದ್ದಾರೆ. ಬಹುತೇಕ ಜನರು ಬಟ್ಟೆ ವ್ಯಾಪಾರಿಗಳು. ಈ ಪ್ರದೇಶದ ಜನರು ನಮಗೆ ಕೋವಿಡ್ ಲಸಿಕೆ ಬೇಡ ಎಂದು ಪಟ್ಟು ಹಿಡಿದಿದ್ದಾರೆ.
ಮೂರು ಬಾರಿ ಅಧಿಕಾರಿಗಳು ಈ ಪ್ರದೇಶಕ್ಕೆ ಹೋಗಿ ಜನರ ಮನವೊಲಿಸಲು ಸಾಧ್ಯವಾಗದೇ ವಾಪಸ್ ಬಂದಿದ್ದಾರೆ. ಇಲ್ಲಿಯ ತನಕ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ. ಜನರು "ನಮಗೆ ಲಸಿಕೆ ಬೇಡ, ದೇವರಿದ್ದಾನೆ" ಎಂದು ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ.

ಗ್ರಾಮ ಪಂಚಾಯಿತಿಯ ಸದಸ್ಯರು ಸಹ ಜನರನ್ನು ಭೇಟಿ ಮಾಡಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಆದರೆ ಜನರು ಮಾತ್ರ ಲಸಿಕೆ ಪಡೆಯಲು ತಯಾರಿಲ್ಲ. ಹೆಚ್ಚು ಒತ್ತಾಯ ಮಾಡಿದಾಗ ಲಸಿಕೆ ಹಾಕಿಸಿಕೊಂಡರೆ ಏನೂ ಆಗುವುದಿಲ್ಲ ಎಂದು 25 ಸಾವಿರ ರೂ. ಬಾಂಡ್ ನೀಡಿ ಆಗ ಹಾಕಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮೂರು ಬಾರಿ ಹೋದರೂ ಜನರು ಬೇರೆ-ಬೇರೆ ನೆಪ ಹೇಳಿ ಲಸಿಕೆ ಹಾಕಿಸಿಕೊಳ್ಳದೇ ವಾಪಸ್ ಕಳಿಸಿದ್ದಾರೆ. ಜನರ ಮನವೊಲಿಕೆ ಅಧಿಕಾರಿಗಳಿಗೆ ತಲೆನೋವಾಗಿದೆ. ಲಸಿಕೆ ಪಡೆದರೆ ಸಾವನ್ನಪ್ಪುತ್ತಾರೆ ಎಂಬ ಭಯವಿದೆ. ನಮ್ಮೊಂದಿಗೆ ದೇವರು ಇದ್ದಾನೆ. ನಮಗೆ ಏನೂ ಆಗೋಲ್ಲ. ಇಲ್ಲಿಗೆ ಕೋವಿಡ್ ಬಂದರೂ ನಮ್ಮನ್ನು ಸಾಯಿಸಲು ಆಗಲ್ಲ. ಸಾವಿರಾರು ಜನರ ನಂಬಿಕೆಗಳಿಸಿದ ದೇವರ ಸ್ಥಳದಲ್ಲಿ ನಾವಿದ್ದೇವೆ. ದೇವರು ನಮ್ಮನ್ನು ರಕ್ಷಣೆ ಮಾಡುತ್ತಾನೆ ಎಂದು ಜನರು ಹೇಳುತ್ತಿದ್ದಾರೆ.
ಮುಳಗುಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಈ ಪ್ರದೇಶ ಬರುತ್ತದೆ. ಕೇಂದ್ರದ ವೈದ್ಯಕೀಯ ಅಧಿಕಾರಿ ಮಾತನಾಡಿದ್ದು, "ನಾವು ಜನರ ಮನವೊಲಿಕೆ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಲಸಿಕೆ ಕುರಿತು ಅವರಲ್ಲಿ ತಪ್ಪು ಕಲ್ಪನೆಗಳಿವೆ" ಎಂದು ಹೇಳಿದ್ದಾರೆ.
However, irrespective of the villagers’ claim, the health and family welfare department made a bid to convince them to take the jab, but to no avail.
14-12-25 03:19 pm
Bangalore Correspondent
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 05:33 pm
Udupi Correspondent
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm