ಬ್ರೇಕಿಂಗ್ ನ್ಯೂಸ್
11-06-21 02:09 pm Headline Karnataka News Network ಕರ್ನಾಟಕ
ಗದಗ, ಜೂನ್ 11; ಕೋವಿಡ್ 2ನೇ ಅಲೆಯಿಂದಾಗಿ ಸಾವಿರಾರು ಜನರು ಇದುವರೆಗೂ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕಿನ ವಿರುದ್ಧದ ಲಸಿಕೆಗೆ ಈಗ ಭಾರೀ ಬೇಡಿಕೆ ಇದೆ. ಆದರೆ ಇಲ್ಲೊಂದು ಪ್ರದೇಶದಲ್ಲಿ ಲಸಿಕೆ ಬೇಡ ಎಂದು ಜನರು ಹೇಳುತ್ತಿದ್ದಾರೆ.
ಇದು ಗದಗ ಜಿಲ್ಲೆಯ ಮುಳಗುಂದದ ಬಳಿ ಇರುವ ದಾವಲ್ ಮಲ್ಲಿಕ್ ಪ್ರದೇಶ. ಇಲ್ಲಿ ಸುಮಾರು 500 ಜನರು ವಾಸವಾಗಿದ್ದಾರೆ. ಬಹುತೇಕ ಜನರು ಬಟ್ಟೆ ವ್ಯಾಪಾರಿಗಳು. ಈ ಪ್ರದೇಶದ ಜನರು ನಮಗೆ ಕೋವಿಡ್ ಲಸಿಕೆ ಬೇಡ ಎಂದು ಪಟ್ಟು ಹಿಡಿದಿದ್ದಾರೆ.
ಮೂರು ಬಾರಿ ಅಧಿಕಾರಿಗಳು ಈ ಪ್ರದೇಶಕ್ಕೆ ಹೋಗಿ ಜನರ ಮನವೊಲಿಸಲು ಸಾಧ್ಯವಾಗದೇ ವಾಪಸ್ ಬಂದಿದ್ದಾರೆ. ಇಲ್ಲಿಯ ತನಕ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ. ಜನರು "ನಮಗೆ ಲಸಿಕೆ ಬೇಡ, ದೇವರಿದ್ದಾನೆ" ಎಂದು ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ.
ಗ್ರಾಮ ಪಂಚಾಯಿತಿಯ ಸದಸ್ಯರು ಸಹ ಜನರನ್ನು ಭೇಟಿ ಮಾಡಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಆದರೆ ಜನರು ಮಾತ್ರ ಲಸಿಕೆ ಪಡೆಯಲು ತಯಾರಿಲ್ಲ. ಹೆಚ್ಚು ಒತ್ತಾಯ ಮಾಡಿದಾಗ ಲಸಿಕೆ ಹಾಕಿಸಿಕೊಂಡರೆ ಏನೂ ಆಗುವುದಿಲ್ಲ ಎಂದು 25 ಸಾವಿರ ರೂ. ಬಾಂಡ್ ನೀಡಿ ಆಗ ಹಾಕಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮೂರು ಬಾರಿ ಹೋದರೂ ಜನರು ಬೇರೆ-ಬೇರೆ ನೆಪ ಹೇಳಿ ಲಸಿಕೆ ಹಾಕಿಸಿಕೊಳ್ಳದೇ ವಾಪಸ್ ಕಳಿಸಿದ್ದಾರೆ. ಜನರ ಮನವೊಲಿಕೆ ಅಧಿಕಾರಿಗಳಿಗೆ ತಲೆನೋವಾಗಿದೆ. ಲಸಿಕೆ ಪಡೆದರೆ ಸಾವನ್ನಪ್ಪುತ್ತಾರೆ ಎಂಬ ಭಯವಿದೆ. ನಮ್ಮೊಂದಿಗೆ ದೇವರು ಇದ್ದಾನೆ. ನಮಗೆ ಏನೂ ಆಗೋಲ್ಲ. ಇಲ್ಲಿಗೆ ಕೋವಿಡ್ ಬಂದರೂ ನಮ್ಮನ್ನು ಸಾಯಿಸಲು ಆಗಲ್ಲ. ಸಾವಿರಾರು ಜನರ ನಂಬಿಕೆಗಳಿಸಿದ ದೇವರ ಸ್ಥಳದಲ್ಲಿ ನಾವಿದ್ದೇವೆ. ದೇವರು ನಮ್ಮನ್ನು ರಕ್ಷಣೆ ಮಾಡುತ್ತಾನೆ ಎಂದು ಜನರು ಹೇಳುತ್ತಿದ್ದಾರೆ.
ಮುಳಗುಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಈ ಪ್ರದೇಶ ಬರುತ್ತದೆ. ಕೇಂದ್ರದ ವೈದ್ಯಕೀಯ ಅಧಿಕಾರಿ ಮಾತನಾಡಿದ್ದು, "ನಾವು ಜನರ ಮನವೊಲಿಕೆ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಲಸಿಕೆ ಕುರಿತು ಅವರಲ್ಲಿ ತಪ್ಪು ಕಲ್ಪನೆಗಳಿವೆ" ಎಂದು ಹೇಳಿದ್ದಾರೆ.
However, irrespective of the villagers’ claim, the health and family welfare department made a bid to convince them to take the jab, but to no avail.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm