ಬ್ರೇಕಿಂಗ್ ನ್ಯೂಸ್
11-06-21 02:09 pm Headline Karnataka News Network ಕರ್ನಾಟಕ
ಗದಗ, ಜೂನ್ 11; ಕೋವಿಡ್ 2ನೇ ಅಲೆಯಿಂದಾಗಿ ಸಾವಿರಾರು ಜನರು ಇದುವರೆಗೂ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕಿನ ವಿರುದ್ಧದ ಲಸಿಕೆಗೆ ಈಗ ಭಾರೀ ಬೇಡಿಕೆ ಇದೆ. ಆದರೆ ಇಲ್ಲೊಂದು ಪ್ರದೇಶದಲ್ಲಿ ಲಸಿಕೆ ಬೇಡ ಎಂದು ಜನರು ಹೇಳುತ್ತಿದ್ದಾರೆ.
ಇದು ಗದಗ ಜಿಲ್ಲೆಯ ಮುಳಗುಂದದ ಬಳಿ ಇರುವ ದಾವಲ್ ಮಲ್ಲಿಕ್ ಪ್ರದೇಶ. ಇಲ್ಲಿ ಸುಮಾರು 500 ಜನರು ವಾಸವಾಗಿದ್ದಾರೆ. ಬಹುತೇಕ ಜನರು ಬಟ್ಟೆ ವ್ಯಾಪಾರಿಗಳು. ಈ ಪ್ರದೇಶದ ಜನರು ನಮಗೆ ಕೋವಿಡ್ ಲಸಿಕೆ ಬೇಡ ಎಂದು ಪಟ್ಟು ಹಿಡಿದಿದ್ದಾರೆ.
ಮೂರು ಬಾರಿ ಅಧಿಕಾರಿಗಳು ಈ ಪ್ರದೇಶಕ್ಕೆ ಹೋಗಿ ಜನರ ಮನವೊಲಿಸಲು ಸಾಧ್ಯವಾಗದೇ ವಾಪಸ್ ಬಂದಿದ್ದಾರೆ. ಇಲ್ಲಿಯ ತನಕ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ. ಜನರು "ನಮಗೆ ಲಸಿಕೆ ಬೇಡ, ದೇವರಿದ್ದಾನೆ" ಎಂದು ಅಧಿಕಾರಿಗಳನ್ನು ವಾಪಸ್ ಕಳಿಸಿದ್ದಾರೆ.

ಗ್ರಾಮ ಪಂಚಾಯಿತಿಯ ಸದಸ್ಯರು ಸಹ ಜನರನ್ನು ಭೇಟಿ ಮಾಡಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಆದರೆ ಜನರು ಮಾತ್ರ ಲಸಿಕೆ ಪಡೆಯಲು ತಯಾರಿಲ್ಲ. ಹೆಚ್ಚು ಒತ್ತಾಯ ಮಾಡಿದಾಗ ಲಸಿಕೆ ಹಾಕಿಸಿಕೊಂಡರೆ ಏನೂ ಆಗುವುದಿಲ್ಲ ಎಂದು 25 ಸಾವಿರ ರೂ. ಬಾಂಡ್ ನೀಡಿ ಆಗ ಹಾಕಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮೂರು ಬಾರಿ ಹೋದರೂ ಜನರು ಬೇರೆ-ಬೇರೆ ನೆಪ ಹೇಳಿ ಲಸಿಕೆ ಹಾಕಿಸಿಕೊಳ್ಳದೇ ವಾಪಸ್ ಕಳಿಸಿದ್ದಾರೆ. ಜನರ ಮನವೊಲಿಕೆ ಅಧಿಕಾರಿಗಳಿಗೆ ತಲೆನೋವಾಗಿದೆ. ಲಸಿಕೆ ಪಡೆದರೆ ಸಾವನ್ನಪ್ಪುತ್ತಾರೆ ಎಂಬ ಭಯವಿದೆ. ನಮ್ಮೊಂದಿಗೆ ದೇವರು ಇದ್ದಾನೆ. ನಮಗೆ ಏನೂ ಆಗೋಲ್ಲ. ಇಲ್ಲಿಗೆ ಕೋವಿಡ್ ಬಂದರೂ ನಮ್ಮನ್ನು ಸಾಯಿಸಲು ಆಗಲ್ಲ. ಸಾವಿರಾರು ಜನರ ನಂಬಿಕೆಗಳಿಸಿದ ದೇವರ ಸ್ಥಳದಲ್ಲಿ ನಾವಿದ್ದೇವೆ. ದೇವರು ನಮ್ಮನ್ನು ರಕ್ಷಣೆ ಮಾಡುತ್ತಾನೆ ಎಂದು ಜನರು ಹೇಳುತ್ತಿದ್ದಾರೆ.
ಮುಳಗುಂಡ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಈ ಪ್ರದೇಶ ಬರುತ್ತದೆ. ಕೇಂದ್ರದ ವೈದ್ಯಕೀಯ ಅಧಿಕಾರಿ ಮಾತನಾಡಿದ್ದು, "ನಾವು ಜನರ ಮನವೊಲಿಕೆ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಲಸಿಕೆ ಕುರಿತು ಅವರಲ್ಲಿ ತಪ್ಪು ಕಲ್ಪನೆಗಳಿವೆ" ಎಂದು ಹೇಳಿದ್ದಾರೆ.
However, irrespective of the villagers’ claim, the health and family welfare department made a bid to convince them to take the jab, but to no avail.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm