ಬ್ರೇಕಿಂಗ್ ನ್ಯೂಸ್
11-06-21 03:17 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡ ಭಾಷೆಯಲ್ಲಿರಲಿದ್ದು, ಈ ನಡೆಯನ್ನು ಮಾಜಿ ಸಿಎಂ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.
ಈ ಕುರಿತು ಗುರುವಾರ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, "ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ" ಎಂದು ಹೇಳಿದ್ದಾರೆ. ಸರಣಿ ಟ್ವೀಟ್ಗಳ ಮೂಲಕ ಕನ್ನಡದ ಕುರಿತು ಇನ್ನಷ್ಟು ವಿಷಯಗಳ ಕುರಿತು ಮಾತನಾಡಿದ್ದಾರೆ.

ಹಿಂದಿನ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಲು ಒತ್ತಾಯ. ಐಬಿಪಿಎಸ್ ಪರೀಕ್ಷೆಗಳ ಕುರಿತು ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ ಎಂದಿದ್ದಾರೆ.

2014ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ ಎಂದು ತಿಳಿಸಿದ್ದಾರೆ.
ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್ ವಲಯದಲ್ಲಿ ಕನ್ನಡಿಗರೇ ಇರಬೇಕು ಎಂದಿದ್ದಾರೆ.
ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ.
— H D Kumaraswamy (@hd_kumaraswamy) June 11, 2021
6/6
ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್(ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್ನ ನಡೆಯನ್ನು ನಾನು ಸ್ವಾಗತಿಸುತ್ತೇನೆ.ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.
— H D Kumaraswamy (@hd_kumaraswamy) June 11, 2021
1/6
Formers cm HD Kumaraswamy Congratulate on IBPS Exams Will Be Held in Kannada
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm