ಬ್ರೇಕಿಂಗ್ ನ್ಯೂಸ್
11-06-21 03:17 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡ ಭಾಷೆಯಲ್ಲಿರಲಿದ್ದು, ಈ ನಡೆಯನ್ನು ಮಾಜಿ ಸಿಎಂ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.
ಈ ಕುರಿತು ಗುರುವಾರ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, "ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ" ಎಂದು ಹೇಳಿದ್ದಾರೆ. ಸರಣಿ ಟ್ವೀಟ್ಗಳ ಮೂಲಕ ಕನ್ನಡದ ಕುರಿತು ಇನ್ನಷ್ಟು ವಿಷಯಗಳ ಕುರಿತು ಮಾತನಾಡಿದ್ದಾರೆ.

ಹಿಂದಿನ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಲು ಒತ್ತಾಯ. ಐಬಿಪಿಎಸ್ ಪರೀಕ್ಷೆಗಳ ಕುರಿತು ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ ಎಂದಿದ್ದಾರೆ.

2014ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ ಎಂದು ತಿಳಿಸಿದ್ದಾರೆ.
ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್ ವಲಯದಲ್ಲಿ ಕನ್ನಡಿಗರೇ ಇರಬೇಕು ಎಂದಿದ್ದಾರೆ.
ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ.
— H D Kumaraswamy (@hd_kumaraswamy) June 11, 2021
6/6
ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್(ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್ನ ನಡೆಯನ್ನು ನಾನು ಸ್ವಾಗತಿಸುತ್ತೇನೆ.ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.
— H D Kumaraswamy (@hd_kumaraswamy) June 11, 2021
1/6
Formers cm HD Kumaraswamy Congratulate on IBPS Exams Will Be Held in Kannada
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm