ಬ್ರೇಕಿಂಗ್ ನ್ಯೂಸ್
11-06-21 03:17 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡ ಭಾಷೆಯಲ್ಲಿರಲಿದ್ದು, ಈ ನಡೆಯನ್ನು ಮಾಜಿ ಸಿಎಂ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.
ಈ ಕುರಿತು ಗುರುವಾರ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, "ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ" ಎಂದು ಹೇಳಿದ್ದಾರೆ. ಸರಣಿ ಟ್ವೀಟ್ಗಳ ಮೂಲಕ ಕನ್ನಡದ ಕುರಿತು ಇನ್ನಷ್ಟು ವಿಷಯಗಳ ಕುರಿತು ಮಾತನಾಡಿದ್ದಾರೆ.

ಹಿಂದಿನ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಲು ಒತ್ತಾಯ. ಐಬಿಪಿಎಸ್ ಪರೀಕ್ಷೆಗಳ ಕುರಿತು ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ ಎಂದಿದ್ದಾರೆ.

2014ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ ಎಂದು ತಿಳಿಸಿದ್ದಾರೆ.
ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್ ವಲಯದಲ್ಲಿ ಕನ್ನಡಿಗರೇ ಇರಬೇಕು ಎಂದಿದ್ದಾರೆ.
ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ.
— H D Kumaraswamy (@hd_kumaraswamy) June 11, 2021
6/6
ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್(ಆರ್ಆರ್ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್ನ ನಡೆಯನ್ನು ನಾನು ಸ್ವಾಗತಿಸುತ್ತೇನೆ.ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.
— H D Kumaraswamy (@hd_kumaraswamy) June 11, 2021
1/6
Formers cm HD Kumaraswamy Congratulate on IBPS Exams Will Be Held in Kannada
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm