ಬ್ರೇಕಿಂಗ್ ನ್ಯೂಸ್
12-06-21 11:37 am Headline Karnataka News Network ಕರ್ನಾಟಕ
ಚಿಕ್ಕಬಳ್ಳಾಫುರ, ಜೂನ್ 12: ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೊ ಧಾರಣೆಯಲ್ಲಿ ತೀವ್ರ ಕುಸಿತವಾಗಿದ್ದು ರೈತರು ತಾವು ಬೆಳೆದ ಟೊಮ್ಯಾಟೋವನ್ನು ರಸ್ತೆಗೆ ಸುರಿದು ಹೋಗಿದ್ದಾರೆ.
ಟೊಮ್ಯಾಟೋವನ್ನು ಕೊಳ್ಳುವವರೇ ಇಲ್ಲದೆ, ಚಿಕ್ಕಬಳ್ಳಾಪುರ ನಗರದ ಮಾರುಕಟ್ಟೆ ಹೊರಗಡೆ ರಸ್ತೆಯಲ್ಲಿ ಸುರಿಯಲಾಗಿದೆ. ರಸ್ತೆಗೆ ಸುರಿದಿರುವ ಟೊಮ್ಯಾಟೋ ರಾಶಿ ದನಗಳಿಗೂ ಬೇಡವಾಗಿದೆ. ರಾಶಿ ಹಾಕಿದ ಹಸಿ ಹಸಿ ಟೊಮ್ಯಾಟೋ ಹಣ್ಣುಗಳನ್ನು ಹಸುಗಳು ತಿನ್ನುತ್ತಿದ್ದು ಹೊಟ್ಟೆ ತುಂಬಿದ ಬಳಿಕ ಹಾಗೇ ಬಿಟ್ಟುಬಿಟ್ಟಿದೆ.
ಚಿಕ್ಕಬಳ್ಳಾಪುರದ ಮಾರುಕಟ್ಟೆಯಲ್ಲಿ 15 ಕೇಜಿಯ ಟೊಮ್ಯಾಟೋ ಬಾಕ್ಸಿಗೆ ಕೇವಲ 50 ರೂ. ಬೆಲೆಯಿದ್ದು ಅಷ್ಟಕ್ಕೂ ಕೊಳ್ಳುವವರಿಲ್ಲದಂತಾಗಿದೆ. ಹೀಗಾಗಿ ರಾಶಿ ರಾಶಿ ಟೊಮ್ಯಾಟೋಗಳನ್ನು ಎಪಿಎಂಸಿ ಮಾರುಕಟ್ಟೆಗೆ ರೈತರು ಹೊರಗಡೆ ಸುರಿದು ಹೋಗಿದ್ದಾರೆ. ಕೇಜಿ ಟೊಮ್ಯಾಟೋ ಬೆಲೆ 3 ರೂಪಾಯಿಗೆ ಕುಸಿದಿದ್ದು ಪಿಕಪ್, ಟೆಂಪೋಗಳಲ್ಲಿ ಮಾರುಕಟ್ಟೆಗೆ ತಂದವರು ವಾಹನ ಬಾಡಿಗೆಯ ಹಣವೂ ಸಿಗದೆ ಕಂಗಾಲಾಗಿದ್ದಾರೆ.





ಚಿಕ್ಕಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆಯ ಹೊರಗಡೆಯಲ್ಲಿ ರಾಶಿಗಟ್ಟಲೆ ಟೊಮ್ಯಾಟೋ ಬಿದ್ದಿದ್ದು ರೈತರ ಸ್ಥಿತಿ ಹೀನಾಯ ಎನ್ನುವಂತಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗದಲ್ಲಿ ಅತಿ ಹೆಚ್ಚು ಟೊಮ್ಯಾಟೊ ಬೆಳೆಯುತ್ತಿದ್ದು ಈಗ ಬೆಳೆಯ ಸೀಸನ್. ಆದರೆ, ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೋಗೆ ಬೆಲೆ ಇಲ್ಲದೆ, ರೈತರು ಕಂಗಾಲಾಗಿದ್ದು ವಾಹನಗಳಲ್ಲಿ ತಂದ ಬೆಳೆಯನ್ನು ದಿನವೂ ರಸ್ತೆಯಲ್ಲೇ ಸುರಿದು ಹೋಗುತ್ತಿದ್ದಾರೆ. ಕೈಗೆ ಬಂದ ತುತ್ತು ಬಾಯಿಗಿಲ್ಲದ ಪರಿಸ್ಥಿತಿ. ಸರಕಾರದ ಕಡೆಯಿಂದ ರೈತರಿಂದ ನೇರವಾಗಿ ಖರೀದಿಸಿ ತಲುಪಿಸುವ ಕಾರ್ಯ ಮಾಡಬಹುದು. ಆದರೆ, ಎಪಿಎಂಸಿಯಾಗಲೀ, ಇತರೇ ಮಾರುಕಟ್ಟೆ ವ್ಯಾಪಾರಸ್ಥರಾಗಲೀ ಆ ಕೆಲಸವನ್ನು ಮಾಡಿಲ್ಲ.
Video: Click
Supply chain distortion of farm produce owing to the lockdown over COVID-19 has hurt both farmers and consumers. There have been reports from across the state of farmers, in despair, destroying their own crop in chikkaballapur
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm