ಬ್ರೇಕಿಂಗ್ ನ್ಯೂಸ್
12-06-21 11:44 am Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 12: ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್. ರೋಷನ್ ಬೇಗ್ ಆಸ್ತಿ ಜಪ್ತಿಗೆ 2 ತಿಂಗಳ ಹಿಂದೆ ಆದೇಶ ನೀಡಿದ್ದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಆಸ್ತಿ ಜಪ್ತಿ ಪ್ರಕ್ರಿಯೆ ಬಗ್ಗೆ ನಿರ್ಧರಿಸಲು ಸರ್ಕಾರಕ್ಕೆ ಗಡುವು ನೀಡಿದೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನವನ್ನು ನೀಡಿದೆ.
ಅರ್ಜಿ ವಿಚಾರಣೆಗೆ ಬಂದಾಗ ರೋಷನ್ ಬೇಗ್ ಆಸ್ತಿ ಜಪ್ತಿ ವಿಚಾರದಲ್ಲಿ ಯಾವೆಲ್ಲಾ ಕ್ರಮ ಜರುಗಿಸಲಾಗಿದೆ ಎಂದು ನ್ಯಾಯಾಪೀಠ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು, ಲಾಕ್ಡೌನ್ ಇದ್ದ ಕಾರಣ ರೋಷನ್ ಬೇಗ್ ಅವರ ಆಸ್ತಿ ಜಪ್ತಿ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದರು ಹೇಳಿದರು.
ಈ ಕಾರಣವನ್ನು ಒಪ್ಪದ ನ್ಯಾಯಪೀಠ, ಲಾಕ್'ಡೌನ್'ಗೂ, ಆಸ್ತಿ ಜಪ್ತಿ ಮಾಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ. ಆಸ್ತಿಗಳನ್ನು ಪರಭಾರೆ ಮಾಡಿದರೆ ಯಾರು ಹೊಣೆ ಎಂದು ಖಾರವಾಗಿ ಪ್ರಶ್ನಿಸಿತು.
ಈ ನಡುವೆ ಸಿಬಿಐ ಪರ ವಾದಿಸಿದ ವಕೀಲ ಪಿ. ಪ್ರಸನ್ನ ಕುಮಾರ್, 'ಹಗರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆ ರ್ಪೂಣಗೊಂಡಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್ಐಆರ್ ಹಾಗೂ ಆರೋಪಪಟ್ಟಿ ರದ್ದುಪಡಿಸಿ ಏಕಸದಸ್ಯ ಪೀಠ ನೀಡಿರುವ ಆದೇಶ ಸುಪ್ರೀಂನಲ್ಲಿ ಪ್ರಶ್ನಿಸಲಾಗುವುದು. ಮತ್ತೊಬ್ಬ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಪ್ರಾಸಿಕ್ಯೂಷನ್ಗೆ ಪೂರ್ವಾನುಮತಿ ಕೋರಿ ಸರಕಾರಕ್ಕೆ ಶ್ರೀಘ್ರವೇ ಮನವಿ ಸಲ್ಲಿಸಲಾಗುವುದು' ಎಂದು ತಿಳಿಸಿದರು.
The Karnataka High Court on Friday slammed the State Government over the delay in taking a decision on attaching the properties of former minister R Roshan Baig.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm