ಬ್ರೇಕಿಂಗ್ ನ್ಯೂಸ್
13-06-21 12:29 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 13: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರದಲ್ಲಿ ಎದ್ದಿರುವ ಬಿಕ್ಕಟ್ಟು ಬಗೆಹರಿಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. ಜೂನ್ 16ರಿಂದ ಮೂರು ದಿನ ಬೆಂಗಳೂರಿನಲ್ಲಿ ಇರಲಿದ್ದು ಸಚಿವರು, ಪಕ್ಷದ ಹಿರಿಯ ನಾಯಕರು, ಅಪಸ್ವರ ಎತ್ತಿರುವ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ಪ್ರಮುಖವಾಗಿ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ ಸೇರಿದಂತೆ ಮೂರು ಮುಖ್ಯ ಗುರಿ ಇಟ್ಟುಕೊಂಡು ಅರುಣ್ ಸಿಂಗ್ ಈ ಭೇಟಿ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ಅಗತ್ಯವಿದೆಯೇ..? ಒಂದೊಮ್ಮೆ ಯಡಿಯೂರಪ್ಪ ಅವರನ್ನು ಬದಲಿಸಿದರೆ ಆಗಬಹುದಾದ ಪರಿಣಾಮಗಳು ಏನೇನು? ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಹೇಗೆ? ಎಂಬ ಬಗ್ಗೆ ಆರ್ಎಸ್ಎಸ್ ನಾಯಕರು, ಬಿಜೆಪಿ ಹಿರಿಯ ನಾಯಕರು, ಸಚಿವರು, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಇದೇ ವೇಳೆ, 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಸಜ್ಜಾಗುವುದು ಹೇಗೆ ? ಅದಕ್ಕಾಗಿ ಸರ್ಕಾರ ಮತ್ತು ಪಕ್ಷದಲ್ಲಿ ಮಾಡಬೇಕಾದ ಬದಲಾವಣೆ ಏನು ? ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕಾದ ಅಗತ್ಯವಿದೆಯೇ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಹೀಗೆ ಎಲ್ಲದರ ಬಗ್ಗೆ ಶಾಸಕರು ಮತ್ತು ಪಕ್ಷದ ನಾಯಕರ ಜೊತೆ ಚರ್ಚಿಸಿ ವರದಿ ನೀಡುವಂತೆ ಅರುಣ್ ಸಿಂಗ್ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ. ಅರುಣ್ ಸಿಂಗ್ ನೀಡುವ ವರದಿ ಆಧರಿಸಿ ಜೆ.ಪಿ. ನಡ್ಡಾ ಅಂತಿಮ ನಿರ್ಧಾರ ಮಾಡಲಿದ್ದಾರೆ.
ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವ ಸಂದರ್ಭದಲ್ಲೇ ಸಿಎಂ ಯಡಿಯೂರಪ್ಪ ವಿರೋಧಿ ಬಣವು ಶಾಸಕಾಂಗ ಪಕ್ಷದ ಸಭೆ ಕರೆಯಲು ಒತ್ತಡ ಹೇರುತ್ತಿದ್ದು, ಈ ಬಗ್ಗೆ ಈಗಾಗಲೇ ಅರುಣ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಈಗಾಗ್ಲೇ ಅರುಣ್ ಸಿಂಗ್ ದೆಹಲಿಯಲ್ಲಿ ಶಾಸಕಾಂಗ ಸಭೆ ಕರೆಯುವುದು ಸಿಎಂ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿರುವ ಹಿನ್ನೆಲೆಯಲ್ಲಿ ಈ ರೀತಿಯ ಸಭೆ ಕರೆಯುವ ಸಾಧ್ಯತೆ ಕಡಿಮೆ.
The Bharatiya Janata Party national general secretary in charge of Karnataka, Arun Singh, is arriving in Bengaluru next week on a troubleshooting exercise in the wake of dissidence in the party State unit.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm