ಬ್ರೇಕಿಂಗ್ ನ್ಯೂಸ್
13-06-21 12:29 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 13: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರದಲ್ಲಿ ಎದ್ದಿರುವ ಬಿಕ್ಕಟ್ಟು ಬಗೆಹರಿಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. ಜೂನ್ 16ರಿಂದ ಮೂರು ದಿನ ಬೆಂಗಳೂರಿನಲ್ಲಿ ಇರಲಿದ್ದು ಸಚಿವರು, ಪಕ್ಷದ ಹಿರಿಯ ನಾಯಕರು, ಅಪಸ್ವರ ಎತ್ತಿರುವ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ಪ್ರಮುಖವಾಗಿ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ ಸೇರಿದಂತೆ ಮೂರು ಮುಖ್ಯ ಗುರಿ ಇಟ್ಟುಕೊಂಡು ಅರುಣ್ ಸಿಂಗ್ ಈ ಭೇಟಿ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ಅಗತ್ಯವಿದೆಯೇ..? ಒಂದೊಮ್ಮೆ ಯಡಿಯೂರಪ್ಪ ಅವರನ್ನು ಬದಲಿಸಿದರೆ ಆಗಬಹುದಾದ ಪರಿಣಾಮಗಳು ಏನೇನು? ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಹೇಗೆ? ಎಂಬ ಬಗ್ಗೆ ಆರ್ಎಸ್ಎಸ್ ನಾಯಕರು, ಬಿಜೆಪಿ ಹಿರಿಯ ನಾಯಕರು, ಸಚಿವರು, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಇದೇ ವೇಳೆ, 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಸಜ್ಜಾಗುವುದು ಹೇಗೆ ? ಅದಕ್ಕಾಗಿ ಸರ್ಕಾರ ಮತ್ತು ಪಕ್ಷದಲ್ಲಿ ಮಾಡಬೇಕಾದ ಬದಲಾವಣೆ ಏನು ? ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕಾದ ಅಗತ್ಯವಿದೆಯೇ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಹೀಗೆ ಎಲ್ಲದರ ಬಗ್ಗೆ ಶಾಸಕರು ಮತ್ತು ಪಕ್ಷದ ನಾಯಕರ ಜೊತೆ ಚರ್ಚಿಸಿ ವರದಿ ನೀಡುವಂತೆ ಅರುಣ್ ಸಿಂಗ್ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ. ಅರುಣ್ ಸಿಂಗ್ ನೀಡುವ ವರದಿ ಆಧರಿಸಿ ಜೆ.ಪಿ. ನಡ್ಡಾ ಅಂತಿಮ ನಿರ್ಧಾರ ಮಾಡಲಿದ್ದಾರೆ.
ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವ ಸಂದರ್ಭದಲ್ಲೇ ಸಿಎಂ ಯಡಿಯೂರಪ್ಪ ವಿರೋಧಿ ಬಣವು ಶಾಸಕಾಂಗ ಪಕ್ಷದ ಸಭೆ ಕರೆಯಲು ಒತ್ತಡ ಹೇರುತ್ತಿದ್ದು, ಈ ಬಗ್ಗೆ ಈಗಾಗಲೇ ಅರುಣ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಈಗಾಗ್ಲೇ ಅರುಣ್ ಸಿಂಗ್ ದೆಹಲಿಯಲ್ಲಿ ಶಾಸಕಾಂಗ ಸಭೆ ಕರೆಯುವುದು ಸಿಎಂ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿರುವ ಹಿನ್ನೆಲೆಯಲ್ಲಿ ಈ ರೀತಿಯ ಸಭೆ ಕರೆಯುವ ಸಾಧ್ಯತೆ ಕಡಿಮೆ.
The Bharatiya Janata Party national general secretary in charge of Karnataka, Arun Singh, is arriving in Bengaluru next week on a troubleshooting exercise in the wake of dissidence in the party State unit.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm