ಬ್ರೇಕಿಂಗ್ ನ್ಯೂಸ್
13-06-21 12:29 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 13: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರದಲ್ಲಿ ಎದ್ದಿರುವ ಬಿಕ್ಕಟ್ಟು ಬಗೆಹರಿಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. ಜೂನ್ 16ರಿಂದ ಮೂರು ದಿನ ಬೆಂಗಳೂರಿನಲ್ಲಿ ಇರಲಿದ್ದು ಸಚಿವರು, ಪಕ್ಷದ ಹಿರಿಯ ನಾಯಕರು, ಅಪಸ್ವರ ಎತ್ತಿರುವ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ಪ್ರಮುಖವಾಗಿ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ ಸೇರಿದಂತೆ ಮೂರು ಮುಖ್ಯ ಗುರಿ ಇಟ್ಟುಕೊಂಡು ಅರುಣ್ ಸಿಂಗ್ ಈ ಭೇಟಿ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ಅಗತ್ಯವಿದೆಯೇ..? ಒಂದೊಮ್ಮೆ ಯಡಿಯೂರಪ್ಪ ಅವರನ್ನು ಬದಲಿಸಿದರೆ ಆಗಬಹುದಾದ ಪರಿಣಾಮಗಳು ಏನೇನು? ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಹೇಗೆ? ಎಂಬ ಬಗ್ಗೆ ಆರ್ಎಸ್ಎಸ್ ನಾಯಕರು, ಬಿಜೆಪಿ ಹಿರಿಯ ನಾಯಕರು, ಸಚಿವರು, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಇದೇ ವೇಳೆ, 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಸಜ್ಜಾಗುವುದು ಹೇಗೆ ? ಅದಕ್ಕಾಗಿ ಸರ್ಕಾರ ಮತ್ತು ಪಕ್ಷದಲ್ಲಿ ಮಾಡಬೇಕಾದ ಬದಲಾವಣೆ ಏನು ? ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕಾದ ಅಗತ್ಯವಿದೆಯೇ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಹೀಗೆ ಎಲ್ಲದರ ಬಗ್ಗೆ ಶಾಸಕರು ಮತ್ತು ಪಕ್ಷದ ನಾಯಕರ ಜೊತೆ ಚರ್ಚಿಸಿ ವರದಿ ನೀಡುವಂತೆ ಅರುಣ್ ಸಿಂಗ್ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ. ಅರುಣ್ ಸಿಂಗ್ ನೀಡುವ ವರದಿ ಆಧರಿಸಿ ಜೆ.ಪಿ. ನಡ್ಡಾ ಅಂತಿಮ ನಿರ್ಧಾರ ಮಾಡಲಿದ್ದಾರೆ.
ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವ ಸಂದರ್ಭದಲ್ಲೇ ಸಿಎಂ ಯಡಿಯೂರಪ್ಪ ವಿರೋಧಿ ಬಣವು ಶಾಸಕಾಂಗ ಪಕ್ಷದ ಸಭೆ ಕರೆಯಲು ಒತ್ತಡ ಹೇರುತ್ತಿದ್ದು, ಈ ಬಗ್ಗೆ ಈಗಾಗಲೇ ಅರುಣ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಈಗಾಗ್ಲೇ ಅರುಣ್ ಸಿಂಗ್ ದೆಹಲಿಯಲ್ಲಿ ಶಾಸಕಾಂಗ ಸಭೆ ಕರೆಯುವುದು ಸಿಎಂ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿರುವ ಹಿನ್ನೆಲೆಯಲ್ಲಿ ಈ ರೀತಿಯ ಸಭೆ ಕರೆಯುವ ಸಾಧ್ಯತೆ ಕಡಿಮೆ.
The Bharatiya Janata Party national general secretary in charge of Karnataka, Arun Singh, is arriving in Bengaluru next week on a troubleshooting exercise in the wake of dissidence in the party State unit.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm