ಬ್ರೇಕಿಂಗ್ ನ್ಯೂಸ್
13-06-21 12:29 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 13: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರದಲ್ಲಿ ಎದ್ದಿರುವ ಬಿಕ್ಕಟ್ಟು ಬಗೆಹರಿಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. ಜೂನ್ 16ರಿಂದ ಮೂರು ದಿನ ಬೆಂಗಳೂರಿನಲ್ಲಿ ಇರಲಿದ್ದು ಸಚಿವರು, ಪಕ್ಷದ ಹಿರಿಯ ನಾಯಕರು, ಅಪಸ್ವರ ಎತ್ತಿರುವ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ಪ್ರಮುಖವಾಗಿ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ ಸೇರಿದಂತೆ ಮೂರು ಮುಖ್ಯ ಗುರಿ ಇಟ್ಟುಕೊಂಡು ಅರುಣ್ ಸಿಂಗ್ ಈ ಭೇಟಿ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ಅಗತ್ಯವಿದೆಯೇ..? ಒಂದೊಮ್ಮೆ ಯಡಿಯೂರಪ್ಪ ಅವರನ್ನು ಬದಲಿಸಿದರೆ ಆಗಬಹುದಾದ ಪರಿಣಾಮಗಳು ಏನೇನು? ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಹೇಗೆ? ಎಂಬ ಬಗ್ಗೆ ಆರ್ಎಸ್ಎಸ್ ನಾಯಕರು, ಬಿಜೆಪಿ ಹಿರಿಯ ನಾಯಕರು, ಸಚಿವರು, ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಇದೇ ವೇಳೆ, 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಸಜ್ಜಾಗುವುದು ಹೇಗೆ ? ಅದಕ್ಕಾಗಿ ಸರ್ಕಾರ ಮತ್ತು ಪಕ್ಷದಲ್ಲಿ ಮಾಡಬೇಕಾದ ಬದಲಾವಣೆ ಏನು ? ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕಾದ ಅಗತ್ಯವಿದೆಯೇ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಹೀಗೆ ಎಲ್ಲದರ ಬಗ್ಗೆ ಶಾಸಕರು ಮತ್ತು ಪಕ್ಷದ ನಾಯಕರ ಜೊತೆ ಚರ್ಚಿಸಿ ವರದಿ ನೀಡುವಂತೆ ಅರುಣ್ ಸಿಂಗ್ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ. ಅರುಣ್ ಸಿಂಗ್ ನೀಡುವ ವರದಿ ಆಧರಿಸಿ ಜೆ.ಪಿ. ನಡ್ಡಾ ಅಂತಿಮ ನಿರ್ಧಾರ ಮಾಡಲಿದ್ದಾರೆ.
ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವ ಸಂದರ್ಭದಲ್ಲೇ ಸಿಎಂ ಯಡಿಯೂರಪ್ಪ ವಿರೋಧಿ ಬಣವು ಶಾಸಕಾಂಗ ಪಕ್ಷದ ಸಭೆ ಕರೆಯಲು ಒತ್ತಡ ಹೇರುತ್ತಿದ್ದು, ಈ ಬಗ್ಗೆ ಈಗಾಗಲೇ ಅರುಣ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಈಗಾಗ್ಲೇ ಅರುಣ್ ಸಿಂಗ್ ದೆಹಲಿಯಲ್ಲಿ ಶಾಸಕಾಂಗ ಸಭೆ ಕರೆಯುವುದು ಸಿಎಂ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿರುವ ಹಿನ್ನೆಲೆಯಲ್ಲಿ ಈ ರೀತಿಯ ಸಭೆ ಕರೆಯುವ ಸಾಧ್ಯತೆ ಕಡಿಮೆ.
The Bharatiya Janata Party national general secretary in charge of Karnataka, Arun Singh, is arriving in Bengaluru next week on a troubleshooting exercise in the wake of dissidence in the party State unit.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm