ಬ್ರೇಕಿಂಗ್ ನ್ಯೂಸ್
13-06-21 01:34 pm Headline Karnataka News Network ಕರ್ನಾಟಕ
ಕಾರವಾರ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ತಾನು ವರ್ಷ ಪೂರ್ತಿ ಓದಿರುವುದು ವ್ಯರ್ಥವಾಯಿತು ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಈ ಘಟನೆ ಶಿರಸಿ ತಾಲೂಕಿನ ಸಹಸ್ರಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಯಡಳ್ಳಿ ಸಮೀಪದ ಸಹಸ್ರಳ್ಳಿಯ ಧನ್ಯಾ ಆಚಾರಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಶಿರಸಿ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಷಯ ಓದುತ್ತಿದ್ದಳು. ಕಾಲೇಜಿಗೆ ಪ್ರಥಮ ರ್ಯಾಂಕ್ ಬರಬೇಕು ಎಂಬ ಆಶಯವನ್ನು ಹೊಂದಿದ್ದಳು. ಆದರೆ ಕೊರೊನಾ ಕಾರಣದಿಂದ ಪರೀಕ್ಷೆ ರದ್ದಾಗಿ, ಪ್ರಥಮ ಪಿಯುಸಿ ಆಧಾರದ ಮೇಲೆ ಅಂಕ ನೀಡುವ ಘೋಷಣೆಯಿಂದ ಚಿಂತೆಯಲ್ಲಿದ್ದಳು.
ಪರೀಕ್ಷೆ ರದ್ದಾದ ಕಾರಣ ವರ್ಷಪೂರ್ತಿ ಓದಿದ್ದು ವ್ಯರ್ಥವಾಯಿತು ಎಂದು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.
Karwar, Sirsi 2nd PU girl commits suicide by shock after the government cancelled board exams.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm