ಬ್ರೇಕಿಂಗ್ ನ್ಯೂಸ್
15-06-21 12:20 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 15 : ಭೂ ಒತ್ತುವರಿ ಆರೋಪಕ್ಕೀಡಾಗಿದ್ದ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಒಡೆತನದ ಸಾರಾ ಕನ್ವೆನ್ಷನ್ ಹಾಲ್ ಪ್ರಕರಣದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು ಸಾರಾ ಮಹೇಶ್ ಗೆ ಕ್ಲೀನ್ ಚಿಟ್ ನೀಡಿದ್ದಾರೆ.
ಸಾರಾ ಪೌಲ್ಟ್ರಿಯನ್ನು ರಾಜಕಾಲುವೆ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆರೋಪಿಸಿ ದಾಖಲೆ ಬಿಡುಗಡೆ ಮಾಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ್ದ ಶಾಸಕರು ಈ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ನಾಲ್ವರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ವರದಿ ನೀಡಲು ಸೂಚಿಸಿದ್ದರು. ಸಮಿತಿ ಸಾರಾ ಕನ್ವೆಂಷನ್ ಹಾಲ್ ಅನ್ನು ರಾಜಕಾಲುವೆ ಮೇಲೆ ನಿರ್ಮಿಸಲಾಗಿಲ್ಲ ಎಂದು ವರದಿ ನೀಡುವ ಮೂಲಕ ಕ್ಲೀನ್ ಚಿಟ್ ನೀಡಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಾರಾ ಮಹೇಶ್, ಸಮೀಕ್ಷೆ ನಡೆಸಿದ ಸ್ಥಳದ ಮ್ಯಾಪ್ ತೋರಿಸಿ ಸ್ಪಷ್ಟನೆ ನೀಡಿದರಲ್ಲದೆ ಹಳ್ಳದ ಮೇಲೆ ಚೌಲ್ಟ್ರಿ ನಿರ್ಮಿತವಾಗಿಲ್ಲ. ಹಳ್ಳದ ಜಾಗವನ್ನು ಒತ್ತುವರಿ ಮಾಡಿಲ್ಲ. ಕೆಲವು ಕಡೆ 70 ಮೀಟರ್ ಅಂತರ ಇರುವುದನ್ನು ತೋರಿಸಲಾಗಿದೆ. ಎಲ್ಲಿಯೂ ಒತ್ತುವರಿ ಆಗಿಲ್ಲ ಎಂದರು.
30 ವರ್ಷಗಳ ಹಿಂದೆ ಎಕರೆಗೆ 90 ಸಾವಿರ ರೂಪಾಯಿಗೆ ನಾಲ್ಕು ಎಕರೆ ಭೂಮಿ ಖರೀದಿ ಮಾಡಿದ್ದೆ. ಎರಡು ಎಕರೆ ಅಕ್ರಮ ಅಂತಾ ಹೇಳಿದ್ದರು. ನಾನು ಖರೀದಿ ಮಾಡಿದ್ದೇ 4 ಎಕರೆ. ಈ ಬಗ್ಗೆ ಅವರಿಗೇ ಸರಿಯಾದ ಮಾಹಿತಿ ಇಲ್ಲ. ಲಿಂಗಾಂಬುದಿಪಾಳ್ಯ ಬಫರ್ಝೋನ್ ವ್ಯಾಪ್ತಿ ಸಂಬಂಧ ಪತ್ರ ಬರೆದಿದ್ದಾರೆ. 2018ರ ಸರ್ಕಾರದ ತಿದ್ದುಪಡಿ ಕಾಯ್ದೆ ಪ್ರಕಾರ 30 ಮೀಟರ್ ಇದೆ. ಆದರೆ, ರೋಹಿಣಿ ಸಿಂಧೂರಿ 2016ರ ಕಾಯ್ದೆ ಪ್ರಕಾರ ಆದೇಶಗಳನ್ನು ಹೊರಡಿಸಿದ್ದಾರೆ ಎಂದು ಟೀಕಿಸಿದರು.
ಕರ್ತವ್ಯ ಲೋಪ ಆರೋಪದ ಮೇರೆಗೆ ರೋಹಿಣಿ ಸಿಂಧೂರಿಯ ವರ್ಗಾವಣೆ ಮಾಡಿರುವುದು. ಆದರೆ ಅದನ್ನು ಮುಚ್ಚಿಡುವ ಸಲುವಾಗಿ ಭೂಮಾಫಿಯಾ ಆರೋಪ ಹೊರಿಸುತ್ತಿದ್ದಾರೆ ಎಂದು ಆರೋಪಿಸಿದರು.
The committee constituted to investigate the allegations against Sara Choultry submitted a report on Monday stating that the said building had not been constructed on the Rajakaluve.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm