ಬ್ರೇಕಿಂಗ್ ನ್ಯೂಸ್
15-06-21 12:20 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 15 : ಭೂ ಒತ್ತುವರಿ ಆರೋಪಕ್ಕೀಡಾಗಿದ್ದ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಒಡೆತನದ ಸಾರಾ ಕನ್ವೆನ್ಷನ್ ಹಾಲ್ ಪ್ರಕರಣದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು ಸಾರಾ ಮಹೇಶ್ ಗೆ ಕ್ಲೀನ್ ಚಿಟ್ ನೀಡಿದ್ದಾರೆ.
ಸಾರಾ ಪೌಲ್ಟ್ರಿಯನ್ನು ರಾಜಕಾಲುವೆ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆರೋಪಿಸಿ ದಾಖಲೆ ಬಿಡುಗಡೆ ಮಾಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ್ದ ಶಾಸಕರು ಈ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ನಾಲ್ವರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ವರದಿ ನೀಡಲು ಸೂಚಿಸಿದ್ದರು. ಸಮಿತಿ ಸಾರಾ ಕನ್ವೆಂಷನ್ ಹಾಲ್ ಅನ್ನು ರಾಜಕಾಲುವೆ ಮೇಲೆ ನಿರ್ಮಿಸಲಾಗಿಲ್ಲ ಎಂದು ವರದಿ ನೀಡುವ ಮೂಲಕ ಕ್ಲೀನ್ ಚಿಟ್ ನೀಡಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಾರಾ ಮಹೇಶ್, ಸಮೀಕ್ಷೆ ನಡೆಸಿದ ಸ್ಥಳದ ಮ್ಯಾಪ್ ತೋರಿಸಿ ಸ್ಪಷ್ಟನೆ ನೀಡಿದರಲ್ಲದೆ ಹಳ್ಳದ ಮೇಲೆ ಚೌಲ್ಟ್ರಿ ನಿರ್ಮಿತವಾಗಿಲ್ಲ. ಹಳ್ಳದ ಜಾಗವನ್ನು ಒತ್ತುವರಿ ಮಾಡಿಲ್ಲ. ಕೆಲವು ಕಡೆ 70 ಮೀಟರ್ ಅಂತರ ಇರುವುದನ್ನು ತೋರಿಸಲಾಗಿದೆ. ಎಲ್ಲಿಯೂ ಒತ್ತುವರಿ ಆಗಿಲ್ಲ ಎಂದರು.
30 ವರ್ಷಗಳ ಹಿಂದೆ ಎಕರೆಗೆ 90 ಸಾವಿರ ರೂಪಾಯಿಗೆ ನಾಲ್ಕು ಎಕರೆ ಭೂಮಿ ಖರೀದಿ ಮಾಡಿದ್ದೆ. ಎರಡು ಎಕರೆ ಅಕ್ರಮ ಅಂತಾ ಹೇಳಿದ್ದರು. ನಾನು ಖರೀದಿ ಮಾಡಿದ್ದೇ 4 ಎಕರೆ. ಈ ಬಗ್ಗೆ ಅವರಿಗೇ ಸರಿಯಾದ ಮಾಹಿತಿ ಇಲ್ಲ. ಲಿಂಗಾಂಬುದಿಪಾಳ್ಯ ಬಫರ್ಝೋನ್ ವ್ಯಾಪ್ತಿ ಸಂಬಂಧ ಪತ್ರ ಬರೆದಿದ್ದಾರೆ. 2018ರ ಸರ್ಕಾರದ ತಿದ್ದುಪಡಿ ಕಾಯ್ದೆ ಪ್ರಕಾರ 30 ಮೀಟರ್ ಇದೆ. ಆದರೆ, ರೋಹಿಣಿ ಸಿಂಧೂರಿ 2016ರ ಕಾಯ್ದೆ ಪ್ರಕಾರ ಆದೇಶಗಳನ್ನು ಹೊರಡಿಸಿದ್ದಾರೆ ಎಂದು ಟೀಕಿಸಿದರು.
ಕರ್ತವ್ಯ ಲೋಪ ಆರೋಪದ ಮೇರೆಗೆ ರೋಹಿಣಿ ಸಿಂಧೂರಿಯ ವರ್ಗಾವಣೆ ಮಾಡಿರುವುದು. ಆದರೆ ಅದನ್ನು ಮುಚ್ಚಿಡುವ ಸಲುವಾಗಿ ಭೂಮಾಫಿಯಾ ಆರೋಪ ಹೊರಿಸುತ್ತಿದ್ದಾರೆ ಎಂದು ಆರೋಪಿಸಿದರು.
The committee constituted to investigate the allegations against Sara Choultry submitted a report on Monday stating that the said building had not been constructed on the Rajakaluve.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm