ಬ್ರೇಕಿಂಗ್ ನ್ಯೂಸ್
15-06-21 12:20 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 15 : ಭೂ ಒತ್ತುವರಿ ಆರೋಪಕ್ಕೀಡಾಗಿದ್ದ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಒಡೆತನದ ಸಾರಾ ಕನ್ವೆನ್ಷನ್ ಹಾಲ್ ಪ್ರಕರಣದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು ಸಾರಾ ಮಹೇಶ್ ಗೆ ಕ್ಲೀನ್ ಚಿಟ್ ನೀಡಿದ್ದಾರೆ.
ಸಾರಾ ಪೌಲ್ಟ್ರಿಯನ್ನು ರಾಜಕಾಲುವೆ ಮೇಲೆ ನಿರ್ಮಾಣ ಮಾಡಲಾಗಿದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆರೋಪಿಸಿ ದಾಖಲೆ ಬಿಡುಗಡೆ ಮಾಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ್ದ ಶಾಸಕರು ಈ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ನಾಲ್ವರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ವರದಿ ನೀಡಲು ಸೂಚಿಸಿದ್ದರು. ಸಮಿತಿ ಸಾರಾ ಕನ್ವೆಂಷನ್ ಹಾಲ್ ಅನ್ನು ರಾಜಕಾಲುವೆ ಮೇಲೆ ನಿರ್ಮಿಸಲಾಗಿಲ್ಲ ಎಂದು ವರದಿ ನೀಡುವ ಮೂಲಕ ಕ್ಲೀನ್ ಚಿಟ್ ನೀಡಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಾರಾ ಮಹೇಶ್, ಸಮೀಕ್ಷೆ ನಡೆಸಿದ ಸ್ಥಳದ ಮ್ಯಾಪ್ ತೋರಿಸಿ ಸ್ಪಷ್ಟನೆ ನೀಡಿದರಲ್ಲದೆ ಹಳ್ಳದ ಮೇಲೆ ಚೌಲ್ಟ್ರಿ ನಿರ್ಮಿತವಾಗಿಲ್ಲ. ಹಳ್ಳದ ಜಾಗವನ್ನು ಒತ್ತುವರಿ ಮಾಡಿಲ್ಲ. ಕೆಲವು ಕಡೆ 70 ಮೀಟರ್ ಅಂತರ ಇರುವುದನ್ನು ತೋರಿಸಲಾಗಿದೆ. ಎಲ್ಲಿಯೂ ಒತ್ತುವರಿ ಆಗಿಲ್ಲ ಎಂದರು.
30 ವರ್ಷಗಳ ಹಿಂದೆ ಎಕರೆಗೆ 90 ಸಾವಿರ ರೂಪಾಯಿಗೆ ನಾಲ್ಕು ಎಕರೆ ಭೂಮಿ ಖರೀದಿ ಮಾಡಿದ್ದೆ. ಎರಡು ಎಕರೆ ಅಕ್ರಮ ಅಂತಾ ಹೇಳಿದ್ದರು. ನಾನು ಖರೀದಿ ಮಾಡಿದ್ದೇ 4 ಎಕರೆ. ಈ ಬಗ್ಗೆ ಅವರಿಗೇ ಸರಿಯಾದ ಮಾಹಿತಿ ಇಲ್ಲ. ಲಿಂಗಾಂಬುದಿಪಾಳ್ಯ ಬಫರ್ಝೋನ್ ವ್ಯಾಪ್ತಿ ಸಂಬಂಧ ಪತ್ರ ಬರೆದಿದ್ದಾರೆ. 2018ರ ಸರ್ಕಾರದ ತಿದ್ದುಪಡಿ ಕಾಯ್ದೆ ಪ್ರಕಾರ 30 ಮೀಟರ್ ಇದೆ. ಆದರೆ, ರೋಹಿಣಿ ಸಿಂಧೂರಿ 2016ರ ಕಾಯ್ದೆ ಪ್ರಕಾರ ಆದೇಶಗಳನ್ನು ಹೊರಡಿಸಿದ್ದಾರೆ ಎಂದು ಟೀಕಿಸಿದರು.
ಕರ್ತವ್ಯ ಲೋಪ ಆರೋಪದ ಮೇರೆಗೆ ರೋಹಿಣಿ ಸಿಂಧೂರಿಯ ವರ್ಗಾವಣೆ ಮಾಡಿರುವುದು. ಆದರೆ ಅದನ್ನು ಮುಚ್ಚಿಡುವ ಸಲುವಾಗಿ ಭೂಮಾಫಿಯಾ ಆರೋಪ ಹೊರಿಸುತ್ತಿದ್ದಾರೆ ಎಂದು ಆರೋಪಿಸಿದರು.
The committee constituted to investigate the allegations against Sara Choultry submitted a report on Monday stating that the said building had not been constructed on the Rajakaluve.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm