ಬ್ರೇಕಿಂಗ್ ನ್ಯೂಸ್
15-06-21 10:06 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 15: ಅಯೋಧ್ಯೆಯ ರಾಮ ಮಂದಿರದ ಕಾರ್ಯದಲ್ಲಿ ಭ್ರಷ್ಟಾಚಾರ ಆಗಿದ್ದರೆ, ಅವರನ್ನು ಯಾವುದೇ ಮುಲಾಜಿಲ್ಲದೆ ಶಿಕ್ಷಿಸಬೇಕು. ಅದರ ಬಗ್ಗೆ ಸುಪ್ರೀಂ ಕೋರ್ಟ್ ನಿಗಾದಡಿ ತನಿಖೆ ನಡೆಯಬೇಕು. ಯಾಕಂದ್ರೆ, ರಾಮ ಮಂದಿರ ದೇಶದ ಜನರ ನಂಬಿಕೆಯ ವಿಚಾರ. ದೇಶಾದ್ಯಂತ ಗ್ರಾಮ ಗ್ರಾಮಗಳಲ್ಲಿ ಜನರಿಂದ ಸಂಗ್ರಹಿಸಿರುವ ಹಣವನ್ನು ದುರುಪಯೋಗ ಮಾಡಿರುವುದು ರಾಮನ ಮೇಲಿನ ನಂಬಿಕೆಯನ್ನೇ ಘಾಸಿಗೊಳಿಸಿದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ನಡೆದ ಪೆಟ್ರೋಲ್ ಬೆಲೆಯೇರಿಕೆ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಡಿಕೆಶಿ, ಹಳ್ಳಿ ಹಳ್ಳಿಗಳ ಜನರು ನೀಡಿರುವ ದೇಣಿಗೆಯ ಹಣದಲ್ಲಿ ಕೋಟ್ಯಂತರ ರೂಪಾಯಿ ಭೂ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಇದು ದೇಶದ ಜನರ ಭಾವನೆಯ ಮೇಲೆ ಮಾಡಿರುವ ಅನ್ಯಾಯ. ಯಾಕಂದ್ರೆ, ಜನರು ತಮ್ಮ ದುಡಿದ ಹಣವನ್ನು ರಾಮನ ಮೇಲಿನ ಭಕ್ತಿಯಿಂದ ಕೊಟ್ಟಿದ್ದಾರೆ. ರಾಮಮಂದಿರದ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪ ಬಂದಿರುವುದು ಇಡೀ ದೇಶಕ್ಕೆ ಅವಮಾನ. ದೇಶದ ಜನತೆಗೆ ಮಾಡಿದ ಅವಮಾನ. ನಂಬಿಕೆಯ ಮೇಲೆ ಎಸಗಿದ ಘೋರ ಪ್ರಮಾದ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕಾಗಿದೆ ಎಂದು ಒತ್ತಾಯಿಸಿದರು.
ದೇಶಾದ್ಯಂತ ಜನರು ರಾಮನಿಗಾಗಿ ತಮ್ಮಿಂದಾದ ಹಣ ಮತ್ತು ಮಂದಿರ ಕಟ್ಟಲು ಕಲ್ಲನ್ನು ದಾನ ನೀಡಿದ್ದಾರೆ. ಈಗ ಈ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು. ಅದರಲ್ಲಿ ಮೋದಿಯೇ ಇರಲಿ, ಯೋಗಿಯೇ ಇರಲಿ. ತಪ್ಪಿತಸ್ಥರಾದರೆ ಶಿಕ್ಷೆ ಎದುರಿಸಬೇಕು. ಯಾಕಂದ್ರೆ, ರಾಮನ ಮೇಲಿನ ದೇಶದ ಜನರ ನಂಬಿಕೆ ಮತ್ತು ಭಾವನೆಯನ್ನು ಇವರು ಘಾಸಿಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಪೆಟ್ರೋಲ್ ದರ ನೂರು ರೂ. ಗಡಿ ದಾಟಿದೆ. ಇದರಲ್ಲಿ 65 ರೂ. ತೆರಿಗೆಯಾದರೆ, ಪೆಟ್ರೋಲಿನ ಮೂಲ ಬೆಲೆ ಕೇವಲ 35 ರೂಪಾಯಿ. ಕೊರೊನಾ ಸಂಕಷ್ಟ ಕಾಲದಲ್ಲಿ ಜನರ ಮೇಲೆ ಹೊರೆ ಹೊರಿಸಿ, ಇವರು ದುಡ್ಡು ಮಾಡುತ್ತಿದ್ದಾರೆ. ದೇಶಾದ್ಯಂತ 100 ನಾಟೌಟ್ ಪ್ರತಿಭಟನೆಯನ್ನು ಕಾಂಗ್ರೆಸ್ ಮಾಡುತ್ತಿದ್ದು ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಡಿಕೆಶಿ ಹೇಳಿದರು.
Karnataka Pradesh Congress Committee president, D K Shivakumar has demanded that the guilty in the alleged Ram Mandir land scam in Ayodhya must be punished.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm