ಬ್ರೇಕಿಂಗ್ ನ್ಯೂಸ್
15-06-21 10:06 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 15: ಅಯೋಧ್ಯೆಯ ರಾಮ ಮಂದಿರದ ಕಾರ್ಯದಲ್ಲಿ ಭ್ರಷ್ಟಾಚಾರ ಆಗಿದ್ದರೆ, ಅವರನ್ನು ಯಾವುದೇ ಮುಲಾಜಿಲ್ಲದೆ ಶಿಕ್ಷಿಸಬೇಕು. ಅದರ ಬಗ್ಗೆ ಸುಪ್ರೀಂ ಕೋರ್ಟ್ ನಿಗಾದಡಿ ತನಿಖೆ ನಡೆಯಬೇಕು. ಯಾಕಂದ್ರೆ, ರಾಮ ಮಂದಿರ ದೇಶದ ಜನರ ನಂಬಿಕೆಯ ವಿಚಾರ. ದೇಶಾದ್ಯಂತ ಗ್ರಾಮ ಗ್ರಾಮಗಳಲ್ಲಿ ಜನರಿಂದ ಸಂಗ್ರಹಿಸಿರುವ ಹಣವನ್ನು ದುರುಪಯೋಗ ಮಾಡಿರುವುದು ರಾಮನ ಮೇಲಿನ ನಂಬಿಕೆಯನ್ನೇ ಘಾಸಿಗೊಳಿಸಿದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ನಡೆದ ಪೆಟ್ರೋಲ್ ಬೆಲೆಯೇರಿಕೆ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಡಿಕೆಶಿ, ಹಳ್ಳಿ ಹಳ್ಳಿಗಳ ಜನರು ನೀಡಿರುವ ದೇಣಿಗೆಯ ಹಣದಲ್ಲಿ ಕೋಟ್ಯಂತರ ರೂಪಾಯಿ ಭೂ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಇದು ದೇಶದ ಜನರ ಭಾವನೆಯ ಮೇಲೆ ಮಾಡಿರುವ ಅನ್ಯಾಯ. ಯಾಕಂದ್ರೆ, ಜನರು ತಮ್ಮ ದುಡಿದ ಹಣವನ್ನು ರಾಮನ ಮೇಲಿನ ಭಕ್ತಿಯಿಂದ ಕೊಟ್ಟಿದ್ದಾರೆ. ರಾಮಮಂದಿರದ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪ ಬಂದಿರುವುದು ಇಡೀ ದೇಶಕ್ಕೆ ಅವಮಾನ. ದೇಶದ ಜನತೆಗೆ ಮಾಡಿದ ಅವಮಾನ. ನಂಬಿಕೆಯ ಮೇಲೆ ಎಸಗಿದ ಘೋರ ಪ್ರಮಾದ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕಾಗಿದೆ ಎಂದು ಒತ್ತಾಯಿಸಿದರು.
ದೇಶಾದ್ಯಂತ ಜನರು ರಾಮನಿಗಾಗಿ ತಮ್ಮಿಂದಾದ ಹಣ ಮತ್ತು ಮಂದಿರ ಕಟ್ಟಲು ಕಲ್ಲನ್ನು ದಾನ ನೀಡಿದ್ದಾರೆ. ಈಗ ಈ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು. ಅದರಲ್ಲಿ ಮೋದಿಯೇ ಇರಲಿ, ಯೋಗಿಯೇ ಇರಲಿ. ತಪ್ಪಿತಸ್ಥರಾದರೆ ಶಿಕ್ಷೆ ಎದುರಿಸಬೇಕು. ಯಾಕಂದ್ರೆ, ರಾಮನ ಮೇಲಿನ ದೇಶದ ಜನರ ನಂಬಿಕೆ ಮತ್ತು ಭಾವನೆಯನ್ನು ಇವರು ಘಾಸಿಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಪೆಟ್ರೋಲ್ ದರ ನೂರು ರೂ. ಗಡಿ ದಾಟಿದೆ. ಇದರಲ್ಲಿ 65 ರೂ. ತೆರಿಗೆಯಾದರೆ, ಪೆಟ್ರೋಲಿನ ಮೂಲ ಬೆಲೆ ಕೇವಲ 35 ರೂಪಾಯಿ. ಕೊರೊನಾ ಸಂಕಷ್ಟ ಕಾಲದಲ್ಲಿ ಜನರ ಮೇಲೆ ಹೊರೆ ಹೊರಿಸಿ, ಇವರು ದುಡ್ಡು ಮಾಡುತ್ತಿದ್ದಾರೆ. ದೇಶಾದ್ಯಂತ 100 ನಾಟೌಟ್ ಪ್ರತಿಭಟನೆಯನ್ನು ಕಾಂಗ್ರೆಸ್ ಮಾಡುತ್ತಿದ್ದು ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಡಿಕೆಶಿ ಹೇಳಿದರು.
Karnataka Pradesh Congress Committee president, D K Shivakumar has demanded that the guilty in the alleged Ram Mandir land scam in Ayodhya must be punished.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm