ಬ್ರೇಕಿಂಗ್ ನ್ಯೂಸ್
15-06-21 10:06 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 15: ಅಯೋಧ್ಯೆಯ ರಾಮ ಮಂದಿರದ ಕಾರ್ಯದಲ್ಲಿ ಭ್ರಷ್ಟಾಚಾರ ಆಗಿದ್ದರೆ, ಅವರನ್ನು ಯಾವುದೇ ಮುಲಾಜಿಲ್ಲದೆ ಶಿಕ್ಷಿಸಬೇಕು. ಅದರ ಬಗ್ಗೆ ಸುಪ್ರೀಂ ಕೋರ್ಟ್ ನಿಗಾದಡಿ ತನಿಖೆ ನಡೆಯಬೇಕು. ಯಾಕಂದ್ರೆ, ರಾಮ ಮಂದಿರ ದೇಶದ ಜನರ ನಂಬಿಕೆಯ ವಿಚಾರ. ದೇಶಾದ್ಯಂತ ಗ್ರಾಮ ಗ್ರಾಮಗಳಲ್ಲಿ ಜನರಿಂದ ಸಂಗ್ರಹಿಸಿರುವ ಹಣವನ್ನು ದುರುಪಯೋಗ ಮಾಡಿರುವುದು ರಾಮನ ಮೇಲಿನ ನಂಬಿಕೆಯನ್ನೇ ಘಾಸಿಗೊಳಿಸಿದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ನಡೆದ ಪೆಟ್ರೋಲ್ ಬೆಲೆಯೇರಿಕೆ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಡಿಕೆಶಿ, ಹಳ್ಳಿ ಹಳ್ಳಿಗಳ ಜನರು ನೀಡಿರುವ ದೇಣಿಗೆಯ ಹಣದಲ್ಲಿ ಕೋಟ್ಯಂತರ ರೂಪಾಯಿ ಭೂ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಇದು ದೇಶದ ಜನರ ಭಾವನೆಯ ಮೇಲೆ ಮಾಡಿರುವ ಅನ್ಯಾಯ. ಯಾಕಂದ್ರೆ, ಜನರು ತಮ್ಮ ದುಡಿದ ಹಣವನ್ನು ರಾಮನ ಮೇಲಿನ ಭಕ್ತಿಯಿಂದ ಕೊಟ್ಟಿದ್ದಾರೆ. ರಾಮಮಂದಿರದ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪ ಬಂದಿರುವುದು ಇಡೀ ದೇಶಕ್ಕೆ ಅವಮಾನ. ದೇಶದ ಜನತೆಗೆ ಮಾಡಿದ ಅವಮಾನ. ನಂಬಿಕೆಯ ಮೇಲೆ ಎಸಗಿದ ಘೋರ ಪ್ರಮಾದ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕಾಗಿದೆ ಎಂದು ಒತ್ತಾಯಿಸಿದರು.
ದೇಶಾದ್ಯಂತ ಜನರು ರಾಮನಿಗಾಗಿ ತಮ್ಮಿಂದಾದ ಹಣ ಮತ್ತು ಮಂದಿರ ಕಟ್ಟಲು ಕಲ್ಲನ್ನು ದಾನ ನೀಡಿದ್ದಾರೆ. ಈಗ ಈ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು. ಅದರಲ್ಲಿ ಮೋದಿಯೇ ಇರಲಿ, ಯೋಗಿಯೇ ಇರಲಿ. ತಪ್ಪಿತಸ್ಥರಾದರೆ ಶಿಕ್ಷೆ ಎದುರಿಸಬೇಕು. ಯಾಕಂದ್ರೆ, ರಾಮನ ಮೇಲಿನ ದೇಶದ ಜನರ ನಂಬಿಕೆ ಮತ್ತು ಭಾವನೆಯನ್ನು ಇವರು ಘಾಸಿಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಪೆಟ್ರೋಲ್ ದರ ನೂರು ರೂ. ಗಡಿ ದಾಟಿದೆ. ಇದರಲ್ಲಿ 65 ರೂ. ತೆರಿಗೆಯಾದರೆ, ಪೆಟ್ರೋಲಿನ ಮೂಲ ಬೆಲೆ ಕೇವಲ 35 ರೂಪಾಯಿ. ಕೊರೊನಾ ಸಂಕಷ್ಟ ಕಾಲದಲ್ಲಿ ಜನರ ಮೇಲೆ ಹೊರೆ ಹೊರಿಸಿ, ಇವರು ದುಡ್ಡು ಮಾಡುತ್ತಿದ್ದಾರೆ. ದೇಶಾದ್ಯಂತ 100 ನಾಟೌಟ್ ಪ್ರತಿಭಟನೆಯನ್ನು ಕಾಂಗ್ರೆಸ್ ಮಾಡುತ್ತಿದ್ದು ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಡಿಕೆಶಿ ಹೇಳಿದರು.
Karnataka Pradesh Congress Committee president, D K Shivakumar has demanded that the guilty in the alleged Ram Mandir land scam in Ayodhya must be punished.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm