ಬ್ರೇಕಿಂಗ್ ನ್ಯೂಸ್
16-06-21 03:31 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂನ್ 16: ಮಲೆನಾಡಲ್ಲಿ ಮುಂಗಾರು ಆರಂಭದಲ್ಲೇ ಅಬ್ಬರಿಸತೊಡಗಿದ್ದು ನಿರಂತರ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯತೊಡಗಿವೆ.
ಕಳಸ-ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗಿದ್ದು ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಭೀತಿಯಲ್ಲಿದೆ. ಸೇತುವೆಯ ಎರಡು ಅಡಿ ಅಂತರದಲ್ಲಿ ನೀರು ಹರಿಯುತ್ತಿದ್ದು ಮಳೆ ಹೀಗೆ ಮುಂದುವರಿದರೆ ಸಂಜೆ ವೇಳೆಗೆ ಮುಳುಗುವ ಸಾಧ್ಯತೆಯಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರಿಕಟ್ಟೆ ಎಂಬಲ್ಲಿ ರಸ್ತೆಗೆ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಈ ಭಾಗದಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.



ಭಾರೀ ಮಳೆಗೆ ಗುಡ್ಡ ಕುಸಿಯುವ ಆತಂಕ
ಮೂಡಿಗೆರೆ ತಾಲೂಕಿನಲ್ಲೂ ಭಾರೀ ಮಳೆಯಾಗಿದ್ದು ಬಿನ್ನಡಿ ಗ್ರಾಮದ ಬಳಿ ಧರೆ ಕುಸಿತವಾಗಿದೆ. ಹೀಗಾಗಿ ಸ್ಥಳೀಯರಲ್ಲಿ ಗುಡ್ಡ ಕುಸಿತದ ಆತಂಕ ಉಂಟಾಗಿದೆ. ಈ ಭಾಗದಲ್ಲಿ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಚಾರ್ಮಾಡಿ ಘಾಟಿಯಲ್ಲೂ ಭಾರೀ ಮಳೆಯಾಗುತ್ತಿದ್ದು ಮತ್ತೆ ಗುಡ್ಡ ಕುಸಿಯುತ್ತಾ ಎನ್ನುವ ಆತಂಕ ಜನರಲ್ಲಿ ಎದುರಾಗಿದೆ.


ಕೊಡಗಿನಲ್ಲಿ ಮರಳು ಲಾರಿ, ಘನ ವಾಹನ ಸಂಚಾರ ನಿಷೇಧ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯಾದ್ಯಂತ ಮರಳು, ಮರ ಸಾಗಾಣಿಕೆಯನ್ನು ನಿಷೇಧ ಮಾಡಲಾಗಿದೆ. ಇದೇ ವೇಳೆ ಭಾರೀ ಸರಕು ಸಾಗಾಣಿಕೆ ವಾಹನ ಸಂಚಾರವನ್ನೂ ನಿಷೇಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಮಾಡಿದ್ದಾರೆ.
ರಸ್ತೆಗಳ ಕುಸಿತ ಆಗುವ ಸಾಧ್ಯತೆ ಮನಗಂಡು ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. 16,200 ಕೆ.ಜಿ.ಗೂ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ ಮತ್ತು ಟ್ಯಾಂಕರ್ ಸಂಚಾರವನ್ನು ನಿಷೇಧ ಮಾಡಲಾಗಿದೆ. ಮಳೆಗಾಲ ಮುಗಿಯುವವರೆಗೂ ಈ ಆದೇಶ ಜಾರಿ ಇರಲಿದೆ.
Heavy Rain: Rivers flowing at a Dangerous Level in Kodagu Chikmagalur.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm