ಬ್ರೇಕಿಂಗ್ ನ್ಯೂಸ್
16-06-21 03:31 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂನ್ 16: ಮಲೆನಾಡಲ್ಲಿ ಮುಂಗಾರು ಆರಂಭದಲ್ಲೇ ಅಬ್ಬರಿಸತೊಡಗಿದ್ದು ನಿರಂತರ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯತೊಡಗಿವೆ.
ಕಳಸ-ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗಿದ್ದು ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಭೀತಿಯಲ್ಲಿದೆ. ಸೇತುವೆಯ ಎರಡು ಅಡಿ ಅಂತರದಲ್ಲಿ ನೀರು ಹರಿಯುತ್ತಿದ್ದು ಮಳೆ ಹೀಗೆ ಮುಂದುವರಿದರೆ ಸಂಜೆ ವೇಳೆಗೆ ಮುಳುಗುವ ಸಾಧ್ಯತೆಯಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರಿಕಟ್ಟೆ ಎಂಬಲ್ಲಿ ರಸ್ತೆಗೆ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಈ ಭಾಗದಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.



ಭಾರೀ ಮಳೆಗೆ ಗುಡ್ಡ ಕುಸಿಯುವ ಆತಂಕ
ಮೂಡಿಗೆರೆ ತಾಲೂಕಿನಲ್ಲೂ ಭಾರೀ ಮಳೆಯಾಗಿದ್ದು ಬಿನ್ನಡಿ ಗ್ರಾಮದ ಬಳಿ ಧರೆ ಕುಸಿತವಾಗಿದೆ. ಹೀಗಾಗಿ ಸ್ಥಳೀಯರಲ್ಲಿ ಗುಡ್ಡ ಕುಸಿತದ ಆತಂಕ ಉಂಟಾಗಿದೆ. ಈ ಭಾಗದಲ್ಲಿ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಚಾರ್ಮಾಡಿ ಘಾಟಿಯಲ್ಲೂ ಭಾರೀ ಮಳೆಯಾಗುತ್ತಿದ್ದು ಮತ್ತೆ ಗುಡ್ಡ ಕುಸಿಯುತ್ತಾ ಎನ್ನುವ ಆತಂಕ ಜನರಲ್ಲಿ ಎದುರಾಗಿದೆ.


ಕೊಡಗಿನಲ್ಲಿ ಮರಳು ಲಾರಿ, ಘನ ವಾಹನ ಸಂಚಾರ ನಿಷೇಧ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯಾದ್ಯಂತ ಮರಳು, ಮರ ಸಾಗಾಣಿಕೆಯನ್ನು ನಿಷೇಧ ಮಾಡಲಾಗಿದೆ. ಇದೇ ವೇಳೆ ಭಾರೀ ಸರಕು ಸಾಗಾಣಿಕೆ ವಾಹನ ಸಂಚಾರವನ್ನೂ ನಿಷೇಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಮಾಡಿದ್ದಾರೆ.
ರಸ್ತೆಗಳ ಕುಸಿತ ಆಗುವ ಸಾಧ್ಯತೆ ಮನಗಂಡು ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. 16,200 ಕೆ.ಜಿ.ಗೂ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ ಮತ್ತು ಟ್ಯಾಂಕರ್ ಸಂಚಾರವನ್ನು ನಿಷೇಧ ಮಾಡಲಾಗಿದೆ. ಮಳೆಗಾಲ ಮುಗಿಯುವವರೆಗೂ ಈ ಆದೇಶ ಜಾರಿ ಇರಲಿದೆ.
Heavy Rain: Rivers flowing at a Dangerous Level in Kodagu Chikmagalur.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm