ಬ್ರೇಕಿಂಗ್ ನ್ಯೂಸ್
16-06-21 03:31 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂನ್ 16: ಮಲೆನಾಡಲ್ಲಿ ಮುಂಗಾರು ಆರಂಭದಲ್ಲೇ ಅಬ್ಬರಿಸತೊಡಗಿದ್ದು ನಿರಂತರ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯತೊಡಗಿವೆ.
ಕಳಸ-ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗಿದ್ದು ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಭೀತಿಯಲ್ಲಿದೆ. ಸೇತುವೆಯ ಎರಡು ಅಡಿ ಅಂತರದಲ್ಲಿ ನೀರು ಹರಿಯುತ್ತಿದ್ದು ಮಳೆ ಹೀಗೆ ಮುಂದುವರಿದರೆ ಸಂಜೆ ವೇಳೆಗೆ ಮುಳುಗುವ ಸಾಧ್ಯತೆಯಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರಿಕಟ್ಟೆ ಎಂಬಲ್ಲಿ ರಸ್ತೆಗೆ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಈ ಭಾಗದಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.



ಭಾರೀ ಮಳೆಗೆ ಗುಡ್ಡ ಕುಸಿಯುವ ಆತಂಕ
ಮೂಡಿಗೆರೆ ತಾಲೂಕಿನಲ್ಲೂ ಭಾರೀ ಮಳೆಯಾಗಿದ್ದು ಬಿನ್ನಡಿ ಗ್ರಾಮದ ಬಳಿ ಧರೆ ಕುಸಿತವಾಗಿದೆ. ಹೀಗಾಗಿ ಸ್ಥಳೀಯರಲ್ಲಿ ಗುಡ್ಡ ಕುಸಿತದ ಆತಂಕ ಉಂಟಾಗಿದೆ. ಈ ಭಾಗದಲ್ಲಿ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಚಾರ್ಮಾಡಿ ಘಾಟಿಯಲ್ಲೂ ಭಾರೀ ಮಳೆಯಾಗುತ್ತಿದ್ದು ಮತ್ತೆ ಗುಡ್ಡ ಕುಸಿಯುತ್ತಾ ಎನ್ನುವ ಆತಂಕ ಜನರಲ್ಲಿ ಎದುರಾಗಿದೆ.


ಕೊಡಗಿನಲ್ಲಿ ಮರಳು ಲಾರಿ, ಘನ ವಾಹನ ಸಂಚಾರ ನಿಷೇಧ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯಾದ್ಯಂತ ಮರಳು, ಮರ ಸಾಗಾಣಿಕೆಯನ್ನು ನಿಷೇಧ ಮಾಡಲಾಗಿದೆ. ಇದೇ ವೇಳೆ ಭಾರೀ ಸರಕು ಸಾಗಾಣಿಕೆ ವಾಹನ ಸಂಚಾರವನ್ನೂ ನಿಷೇಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಮಾಡಿದ್ದಾರೆ.
ರಸ್ತೆಗಳ ಕುಸಿತ ಆಗುವ ಸಾಧ್ಯತೆ ಮನಗಂಡು ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. 16,200 ಕೆ.ಜಿ.ಗೂ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ ಮತ್ತು ಟ್ಯಾಂಕರ್ ಸಂಚಾರವನ್ನು ನಿಷೇಧ ಮಾಡಲಾಗಿದೆ. ಮಳೆಗಾಲ ಮುಗಿಯುವವರೆಗೂ ಈ ಆದೇಶ ಜಾರಿ ಇರಲಿದೆ.
Heavy Rain: Rivers flowing at a Dangerous Level in Kodagu Chikmagalur.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm