ಬ್ರೇಕಿಂಗ್ ನ್ಯೂಸ್
16-06-21 03:31 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂನ್ 16: ಮಲೆನಾಡಲ್ಲಿ ಮುಂಗಾರು ಆರಂಭದಲ್ಲೇ ಅಬ್ಬರಿಸತೊಡಗಿದ್ದು ನಿರಂತರ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯತೊಡಗಿವೆ.
ಕಳಸ-ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗಿದ್ದು ಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಭೀತಿಯಲ್ಲಿದೆ. ಸೇತುವೆಯ ಎರಡು ಅಡಿ ಅಂತರದಲ್ಲಿ ನೀರು ಹರಿಯುತ್ತಿದ್ದು ಮಳೆ ಹೀಗೆ ಮುಂದುವರಿದರೆ ಸಂಜೆ ವೇಳೆಗೆ ಮುಳುಗುವ ಸಾಧ್ಯತೆಯಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರಿಕಟ್ಟೆ ಎಂಬಲ್ಲಿ ರಸ್ತೆಗೆ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಈ ಭಾಗದಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.



ಭಾರೀ ಮಳೆಗೆ ಗುಡ್ಡ ಕುಸಿಯುವ ಆತಂಕ
ಮೂಡಿಗೆರೆ ತಾಲೂಕಿನಲ್ಲೂ ಭಾರೀ ಮಳೆಯಾಗಿದ್ದು ಬಿನ್ನಡಿ ಗ್ರಾಮದ ಬಳಿ ಧರೆ ಕುಸಿತವಾಗಿದೆ. ಹೀಗಾಗಿ ಸ್ಥಳೀಯರಲ್ಲಿ ಗುಡ್ಡ ಕುಸಿತದ ಆತಂಕ ಉಂಟಾಗಿದೆ. ಈ ಭಾಗದಲ್ಲಿ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಚಾರ್ಮಾಡಿ ಘಾಟಿಯಲ್ಲೂ ಭಾರೀ ಮಳೆಯಾಗುತ್ತಿದ್ದು ಮತ್ತೆ ಗುಡ್ಡ ಕುಸಿಯುತ್ತಾ ಎನ್ನುವ ಆತಂಕ ಜನರಲ್ಲಿ ಎದುರಾಗಿದೆ.


ಕೊಡಗಿನಲ್ಲಿ ಮರಳು ಲಾರಿ, ಘನ ವಾಹನ ಸಂಚಾರ ನಿಷೇಧ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯಾದ್ಯಂತ ಮರಳು, ಮರ ಸಾಗಾಣಿಕೆಯನ್ನು ನಿಷೇಧ ಮಾಡಲಾಗಿದೆ. ಇದೇ ವೇಳೆ ಭಾರೀ ಸರಕು ಸಾಗಾಣಿಕೆ ವಾಹನ ಸಂಚಾರವನ್ನೂ ನಿಷೇಧಿಸಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಮಾಡಿದ್ದಾರೆ.
ರಸ್ತೆಗಳ ಕುಸಿತ ಆಗುವ ಸಾಧ್ಯತೆ ಮನಗಂಡು ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. 16,200 ಕೆ.ಜಿ.ಗೂ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ ಮತ್ತು ಟ್ಯಾಂಕರ್ ಸಂಚಾರವನ್ನು ನಿಷೇಧ ಮಾಡಲಾಗಿದೆ. ಮಳೆಗಾಲ ಮುಗಿಯುವವರೆಗೂ ಈ ಆದೇಶ ಜಾರಿ ಇರಲಿದೆ.
Heavy Rain: Rivers flowing at a Dangerous Level in Kodagu Chikmagalur.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm