ಬ್ರೇಕಿಂಗ್ ನ್ಯೂಸ್
16-06-21 06:11 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೀಡಾಗಿರುವಾಗಲೇ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸಿ.ಪಿ. ಯೋಗೀಶ್ವರ್ ಹೊರತುಪಡಿಸಿ ಉಳಿದ 31 ಸಚಿವರು ಭಾಗಿಯಾಗಿದ್ದಾರೆ.

ಹಿರಿಯ ಸಚಿವರಾದ ಈಶ್ವರಪ್ಪ, ಅಶೋಕ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಅಶ್ವತ್ಥ ನಾರಾಯಣ ಸೇರಿ ಎಲ್ಲ ಸಚಿವರು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಮುಖವಾಗಿ ಸಭೆಯಲ್ಲಿ ನಾಯಕತ್ವದ ವಿಚಾರ ಚರ್ಚೆಗೀಡಾಗುವ ಸಾಧ್ಯತೆಯಿದೆ. ಆದರೆ, ಎಲ್ಲ ಸಚಿವರ ಅಹವಾಲುಗಳನ್ನು ಪಡೆದು ಉಸ್ತುವಾರಿ ಅರುಣ್ ಸಿಂಗ್ ಹೈಕಮಾಂಡಿಗೆ ಮುಟ್ಟಿಸಲಿದ್ದಾರೆ.

ಈಗಾಗ್ಲೇ ರಾಜ್ಯದಲ್ಲಿ ಎರಡು ಬಣಗಳಾಗಿರುವ ಶಾಸಕರ ಗುಂಪು ಯಡಿಯೂರಪ್ಪ ಪರ ಮತ್ತು ವಿರೋಧವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಕೆಲವು ಶಾಸಕರು ಬಹಿರಂಗವಾಗಿಯೇ ಹೇಳಿಕೆಗಳನ್ನೂ ನೀಡಿದ್ದಾರೆ. ಸಚಿವ ಯೋಗೀಶ್ವರ್ ಪ್ರಮುಖವಾಗಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ, ಯಡಿಯೂರಪ್ಪ ಅವರನ್ನು ಬದಲಿಸುವ ನಿಟ್ಟಿನಲ್ಲಿ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಸಹಿ ಸಂಗ್ರಹ ಮಾಡಿದ್ದು, ವಿರೋಧಿ ಬಣಗಳ ಹೆಸರಲ್ಲಿ ಹೇಳಿಕೆ ನೀಡುತ್ತಿರುವ ಮಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಉಸ್ತುವಾರಿ ಅರುಣ್ ಸಿಂಗ್ ನಾಳೆ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಯಾವುದೇ ಕಾರ್ಯಕ್ರಮ ಅಂತಿಮ ಆಗಿಲ್ಲ.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರಲ್ಲಿ ಸುದ್ದಿಗಾರರು ನಾಯಕತ್ವದ ವಿಚಾರದಲ್ಲಿ ಪ್ರಶ್ನೆ ಮುಂದಿಟ್ಟಾಗ, ಆ ಬಗ್ಗೆ ಉತ್ತರಿಸದೇ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸುವುದಕ್ಕಾಗಿ ಬಂದಿದ್ದೇನೆ ಎಂದುತ್ತರಿಸಿ ಹೊರಟಿದ್ದರು. ನಾಯಕತ್ವದ ವಿಚಾರದಲ್ಲಿ ಚರ್ಚೆ ನಡೆಸದೇ ಕೇವಲ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸಕ್ಕೆ ಮಾತ್ರ ಕೈಹಾಕುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕು.
Bjp leadership issue, party state in-charge Arun Singh meeting held in Bangalore
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm