ಬ್ರೇಕಿಂಗ್ ನ್ಯೂಸ್
16-06-21 06:11 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೀಡಾಗಿರುವಾಗಲೇ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸಿ.ಪಿ. ಯೋಗೀಶ್ವರ್ ಹೊರತುಪಡಿಸಿ ಉಳಿದ 31 ಸಚಿವರು ಭಾಗಿಯಾಗಿದ್ದಾರೆ.

ಹಿರಿಯ ಸಚಿವರಾದ ಈಶ್ವರಪ್ಪ, ಅಶೋಕ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಅಶ್ವತ್ಥ ನಾರಾಯಣ ಸೇರಿ ಎಲ್ಲ ಸಚಿವರು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಮುಖವಾಗಿ ಸಭೆಯಲ್ಲಿ ನಾಯಕತ್ವದ ವಿಚಾರ ಚರ್ಚೆಗೀಡಾಗುವ ಸಾಧ್ಯತೆಯಿದೆ. ಆದರೆ, ಎಲ್ಲ ಸಚಿವರ ಅಹವಾಲುಗಳನ್ನು ಪಡೆದು ಉಸ್ತುವಾರಿ ಅರುಣ್ ಸಿಂಗ್ ಹೈಕಮಾಂಡಿಗೆ ಮುಟ್ಟಿಸಲಿದ್ದಾರೆ.

ಈಗಾಗ್ಲೇ ರಾಜ್ಯದಲ್ಲಿ ಎರಡು ಬಣಗಳಾಗಿರುವ ಶಾಸಕರ ಗುಂಪು ಯಡಿಯೂರಪ್ಪ ಪರ ಮತ್ತು ವಿರೋಧವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಕೆಲವು ಶಾಸಕರು ಬಹಿರಂಗವಾಗಿಯೇ ಹೇಳಿಕೆಗಳನ್ನೂ ನೀಡಿದ್ದಾರೆ. ಸಚಿವ ಯೋಗೀಶ್ವರ್ ಪ್ರಮುಖವಾಗಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ, ಯಡಿಯೂರಪ್ಪ ಅವರನ್ನು ಬದಲಿಸುವ ನಿಟ್ಟಿನಲ್ಲಿ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಸಹಿ ಸಂಗ್ರಹ ಮಾಡಿದ್ದು, ವಿರೋಧಿ ಬಣಗಳ ಹೆಸರಲ್ಲಿ ಹೇಳಿಕೆ ನೀಡುತ್ತಿರುವ ಮಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಉಸ್ತುವಾರಿ ಅರುಣ್ ಸಿಂಗ್ ನಾಳೆ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಯಾವುದೇ ಕಾರ್ಯಕ್ರಮ ಅಂತಿಮ ಆಗಿಲ್ಲ.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರಲ್ಲಿ ಸುದ್ದಿಗಾರರು ನಾಯಕತ್ವದ ವಿಚಾರದಲ್ಲಿ ಪ್ರಶ್ನೆ ಮುಂದಿಟ್ಟಾಗ, ಆ ಬಗ್ಗೆ ಉತ್ತರಿಸದೇ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸುವುದಕ್ಕಾಗಿ ಬಂದಿದ್ದೇನೆ ಎಂದುತ್ತರಿಸಿ ಹೊರಟಿದ್ದರು. ನಾಯಕತ್ವದ ವಿಚಾರದಲ್ಲಿ ಚರ್ಚೆ ನಡೆಸದೇ ಕೇವಲ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸಕ್ಕೆ ಮಾತ್ರ ಕೈಹಾಕುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕು.
Bjp leadership issue, party state in-charge Arun Singh meeting held in Bangalore
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm