ಬ್ರೇಕಿಂಗ್ ನ್ಯೂಸ್
16-06-21 06:11 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೀಡಾಗಿರುವಾಗಲೇ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸಿ.ಪಿ. ಯೋಗೀಶ್ವರ್ ಹೊರತುಪಡಿಸಿ ಉಳಿದ 31 ಸಚಿವರು ಭಾಗಿಯಾಗಿದ್ದಾರೆ.

ಹಿರಿಯ ಸಚಿವರಾದ ಈಶ್ವರಪ್ಪ, ಅಶೋಕ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಅಶ್ವತ್ಥ ನಾರಾಯಣ ಸೇರಿ ಎಲ್ಲ ಸಚಿವರು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಮುಖವಾಗಿ ಸಭೆಯಲ್ಲಿ ನಾಯಕತ್ವದ ವಿಚಾರ ಚರ್ಚೆಗೀಡಾಗುವ ಸಾಧ್ಯತೆಯಿದೆ. ಆದರೆ, ಎಲ್ಲ ಸಚಿವರ ಅಹವಾಲುಗಳನ್ನು ಪಡೆದು ಉಸ್ತುವಾರಿ ಅರುಣ್ ಸಿಂಗ್ ಹೈಕಮಾಂಡಿಗೆ ಮುಟ್ಟಿಸಲಿದ್ದಾರೆ.

ಈಗಾಗ್ಲೇ ರಾಜ್ಯದಲ್ಲಿ ಎರಡು ಬಣಗಳಾಗಿರುವ ಶಾಸಕರ ಗುಂಪು ಯಡಿಯೂರಪ್ಪ ಪರ ಮತ್ತು ವಿರೋಧವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಕೆಲವು ಶಾಸಕರು ಬಹಿರಂಗವಾಗಿಯೇ ಹೇಳಿಕೆಗಳನ್ನೂ ನೀಡಿದ್ದಾರೆ. ಸಚಿವ ಯೋಗೀಶ್ವರ್ ಪ್ರಮುಖವಾಗಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ, ಯಡಿಯೂರಪ್ಪ ಅವರನ್ನು ಬದಲಿಸುವ ನಿಟ್ಟಿನಲ್ಲಿ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಸಹಿ ಸಂಗ್ರಹ ಮಾಡಿದ್ದು, ವಿರೋಧಿ ಬಣಗಳ ಹೆಸರಲ್ಲಿ ಹೇಳಿಕೆ ನೀಡುತ್ತಿರುವ ಮಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಉಸ್ತುವಾರಿ ಅರುಣ್ ಸಿಂಗ್ ನಾಳೆ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಯಾವುದೇ ಕಾರ್ಯಕ್ರಮ ಅಂತಿಮ ಆಗಿಲ್ಲ.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರಲ್ಲಿ ಸುದ್ದಿಗಾರರು ನಾಯಕತ್ವದ ವಿಚಾರದಲ್ಲಿ ಪ್ರಶ್ನೆ ಮುಂದಿಟ್ಟಾಗ, ಆ ಬಗ್ಗೆ ಉತ್ತರಿಸದೇ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸುವುದಕ್ಕಾಗಿ ಬಂದಿದ್ದೇನೆ ಎಂದುತ್ತರಿಸಿ ಹೊರಟಿದ್ದರು. ನಾಯಕತ್ವದ ವಿಚಾರದಲ್ಲಿ ಚರ್ಚೆ ನಡೆಸದೇ ಕೇವಲ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸಕ್ಕೆ ಮಾತ್ರ ಕೈಹಾಕುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕು.
Bjp leadership issue, party state in-charge Arun Singh meeting held in Bangalore
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm