ಬ್ರೇಕಿಂಗ್ ನ್ಯೂಸ್
16-06-21 06:11 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೀಡಾಗಿರುವಾಗಲೇ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸಿ.ಪಿ. ಯೋಗೀಶ್ವರ್ ಹೊರತುಪಡಿಸಿ ಉಳಿದ 31 ಸಚಿವರು ಭಾಗಿಯಾಗಿದ್ದಾರೆ.
ಹಿರಿಯ ಸಚಿವರಾದ ಈಶ್ವರಪ್ಪ, ಅಶೋಕ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಅಶ್ವತ್ಥ ನಾರಾಯಣ ಸೇರಿ ಎಲ್ಲ ಸಚಿವರು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಮುಖವಾಗಿ ಸಭೆಯಲ್ಲಿ ನಾಯಕತ್ವದ ವಿಚಾರ ಚರ್ಚೆಗೀಡಾಗುವ ಸಾಧ್ಯತೆಯಿದೆ. ಆದರೆ, ಎಲ್ಲ ಸಚಿವರ ಅಹವಾಲುಗಳನ್ನು ಪಡೆದು ಉಸ್ತುವಾರಿ ಅರುಣ್ ಸಿಂಗ್ ಹೈಕಮಾಂಡಿಗೆ ಮುಟ್ಟಿಸಲಿದ್ದಾರೆ.
ಈಗಾಗ್ಲೇ ರಾಜ್ಯದಲ್ಲಿ ಎರಡು ಬಣಗಳಾಗಿರುವ ಶಾಸಕರ ಗುಂಪು ಯಡಿಯೂರಪ್ಪ ಪರ ಮತ್ತು ವಿರೋಧವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಕೆಲವು ಶಾಸಕರು ಬಹಿರಂಗವಾಗಿಯೇ ಹೇಳಿಕೆಗಳನ್ನೂ ನೀಡಿದ್ದಾರೆ. ಸಚಿವ ಯೋಗೀಶ್ವರ್ ಪ್ರಮುಖವಾಗಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ, ಯಡಿಯೂರಪ್ಪ ಅವರನ್ನು ಬದಲಿಸುವ ನಿಟ್ಟಿನಲ್ಲಿ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ.
ಇದೇ ವೇಳೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಸಹಿ ಸಂಗ್ರಹ ಮಾಡಿದ್ದು, ವಿರೋಧಿ ಬಣಗಳ ಹೆಸರಲ್ಲಿ ಹೇಳಿಕೆ ನೀಡುತ್ತಿರುವ ಮಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಉಸ್ತುವಾರಿ ಅರುಣ್ ಸಿಂಗ್ ನಾಳೆ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಯಾವುದೇ ಕಾರ್ಯಕ್ರಮ ಅಂತಿಮ ಆಗಿಲ್ಲ.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರಲ್ಲಿ ಸುದ್ದಿಗಾರರು ನಾಯಕತ್ವದ ವಿಚಾರದಲ್ಲಿ ಪ್ರಶ್ನೆ ಮುಂದಿಟ್ಟಾಗ, ಆ ಬಗ್ಗೆ ಉತ್ತರಿಸದೇ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸುವುದಕ್ಕಾಗಿ ಬಂದಿದ್ದೇನೆ ಎಂದುತ್ತರಿಸಿ ಹೊರಟಿದ್ದರು. ನಾಯಕತ್ವದ ವಿಚಾರದಲ್ಲಿ ಚರ್ಚೆ ನಡೆಸದೇ ಕೇವಲ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸಕ್ಕೆ ಮಾತ್ರ ಕೈಹಾಕುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕು.
Bjp leadership issue, party state in-charge Arun Singh meeting held in Bangalore
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:01 pm
Mangalore Correspondent
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm