ಬ್ರೇಕಿಂಗ್ ನ್ಯೂಸ್
17-06-21 12:20 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17: ಬಿಜೆಪಿಯಲ್ಲಿ ನಾಯಕತ್ವ ವಿಚಾರದಲ್ಲಿ ಅಪಸ್ವರ ಎದ್ದಿರುವಾಗಲೇ ಬೆಂಗಳೂರಿಗೆ ಬಂದಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಚರ್ಚೆ ನಡೆದಿಲ್ಲ ಎನ್ನಲಾಗುತ್ತಿದೆ. ಸಭೆ ಬಳಿಕ ಪ್ರತಿಕ್ರಿಯಿಸಿದ ಅರುಣ್ ಸಿಂಗ್, ನಾಯಕತ್ವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿಲ್ಲ ಎಂದಿದ್ದಾರೆ.
ಸಿಎಂ ಮತ್ತು ಸಚಿವರುಗಳ ಜೊತೆ ಮಾತುಕತೆ ನಡೆಸಿದ್ದೇನೆ. ಕೋವಿಡ್ ಸಂಬಂಧಿಸಿ ಸೂಚನೆಗಳನ್ನು ನೀಡಿದ್ದೇನೆ. ಸಚಿವರು ಎಲ್ಲ ಜಿಲ್ಲೆಗೆ ತೆರಳಿ ಕಾರ್ಯಕರ್ತರ ಜೊತೆ ಕೆಲಸ ಮಾಡಬೇಕು. ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದ್ದಾಗಿ ತಿಳಿಸಿದರು.


ಪ್ರತಿ ಗುರುವಾರ ಒಂದು ದಿನ ಆಯಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಬೇಕು. ಪ್ರಸ್ತುತ ಕೊರೊನಾದಿಂದ ಮೃತಪಟ್ಟ ಬಡವರ ಕುಟುಂಬಕ್ಕೆ ೧ ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಇದು ಸಂಬಂಧಪಟ್ಟವರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಬಡವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು.
ಸಭೆಯಲ್ಲಿ ಕೋವಿಡ್, ಪಕ್ಷ ಸಂಘಟನೆ, ಶಾಸಕರ ಸಮಸ್ಯೆ ಆಲಿಸುವ ಬಗ್ಗೆ ಮಾತ್ರ ಚರ್ಚೆ ಆಗಿದೆ. ನಾಯಕತ್ವದ ವಿಚಾರದಲ್ಲಿ ಚರ್ಚೆ ಆಗಿಲ್ಲ. ಪಕ್ಷದ ಶಾಸಕರಾಗಲಿ, ಕಾರ್ಯಕರ್ತರಾಗಲಿ ಪಕ್ಷಕ್ಕೆ ಧಕ್ಕೆ ತರುವ ಹೇಳಿಕೆ ಕೊಡಬಾರದು. ಬಹಿರಂಗ ಹೇಳಿಕೆ ಕೊಡದಂತೆ ಸೂಚಿಸಿದ್ದೇನೆ ಎಂದರು.


ಶಾಸಕರಾದ ಯತ್ನಾಳ್, ಅರವಿಂದ ಬೆಲ್ಲದ ಅವರ ಬಗ್ಗೆ ಚರ್ಚಿಸಿದ್ದೇವೆ. ಯಾರು ಕೂಡ ತಮ್ಮ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ನೋಡಿಕೊಳ್ಳಬೇಕು. ಇದರ ಬಗ್ಗೆ ಕಟ್ಟುನಿಟ್ಟಾಗಿ ಸೂಚಿಸಿದ್ದೇವೆ. ಯಾರೂ ಬಹಿರಂಗವಾಗಿ ಹೇಳಿಕೆ ಕೊಡಬಾರದು. ಶಾಸಕರು ತಮ್ಮ ಸಮಸ್ಯೆಗಳನ್ನ ಹೇಳಿಕೊಳ್ಳಬಹುದು. ಎಲ್ಲರಿಗೂ ಮುಕ್ತ ಚರ್ಚೆಗೆ ಅವಕಾಶವಿದೆ. ಆದರೆ ಪಕ್ಷಕ್ಕೆ ಧಕ್ಕೆ ಬರುವ ರೀತಿ ಹೇಳಿಕೆಗಳನ್ನು ನೀಡುವುದು ಬೇಡ ಎಂದು ಎಚ್ಚರಿಕೆ ನೀಡಿದರು.

ಇನ್ನು ಬಂಡಾಯ ನಾಯಕರೆಂದು ಗುರುತಿಸಿಕೊಂಡ, ಸಚಿವ ಸಿ.ಪಿ.ಯೋಗೀಶ್ವರ್, ಅರುಣ್ ಸಿಂಗ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸಮಸ್ಯೆ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಇಂದು (ಜೂ.17) ಶಾಸಕರ ಜೊತೆ ಅರುಣ್ ಸಿಂಗ್ ಮಾತುಕತೆ ನಡೆಸಲಿದ್ದಾರೆ. ನಾಯಕತ್ವದ ವಿಚಾರದಲ್ಲಿನ ಅಪಸ್ವರದ ಬಗ್ಗೆ ಶಾಸಕರ ಅಭಿಪ್ರಾಯಗಳನ್ನು ಪಡೆದು ಹೈಕಮಾಂಡಿಗೆ ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm