ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.


ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.

ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm