ಬ್ರೇಕಿಂಗ್ ನ್ಯೂಸ್
17-06-21 05:54 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17 : ನಾಯಕತ್ವ ಬದಲಾವಣೆ ವಿಚಾರದಲ್ಲಿ ರಾಜ್ಯ ಬಿಜೆಪಿ ಸರಕಾರದಲ್ಲಿ ಕಚ್ಚಾಟ ಎದ್ದಿರುವಾಗಲೇ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಸವಣ್ಣನದ ವಚನ ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿದ್ದು ನಾಯಕನಿಲ್ಲದ ಸರಕಾರ ಇರುವುದೇಕೆ ? ಕೂಡಲೇ ವಿಸರ್ಜಿಸಿ ಬಿಜೆಪಿ ನಾಯಕರನ್ನು ತಿವಿದಿದ್ದಾರೆ.
'ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ. ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ ಕೂಡಲ ಸಂಗಮದೇವಾ.. ಎಂಬ ವಚನವನ್ನು ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, 'ಬಿಜೆಪಿಯಲ್ಲಿ ನಾಯಕತ್ವ ಇದೆಯೋ? ಇಲ್ಲವೋ? ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ ಎಂದು ಪ್ರಶ್ನೆ ಮಾಡಿದ್ದಾರೆ.

'ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ ಸಿಎಂ ಆಗಬಲ್ಲ ನಾಯಕನೇ ಇಲ್ಲವಂತೆ, ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ, ವಿಸರ್ಜಿಸಿ ಮೊದಲು' ಎಂದು ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
'ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ'
ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು? ಇದೇ ಕಾಂಗ್ರೆಸ್ ಅಲ್ಲವೇ? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು.
— H D Kumaraswamy (@hd_kumaraswamy) June 17, 2021
7/8
'ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ?' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
'ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ "ಸಮಾಜ ಸುಧಾರಕರು" ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ'
ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು.
— H D Kumaraswamy (@hd_kumaraswamy) June 17, 2021
ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ
ಮನೆಯೊಳಗೆ ರಜ ತುಂಬಿ
ಮನೆಯೊಳಗೆ ಮನೆಯೊಡೆಯನಿದ್ದಾನೊ
ಇಲ್ಲವೊ
- ಕೂಡಲ ಸಂಗಮದೇವ
ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ.
1/8
'ಕೋವಿಡ್, ಲಾಕ್ಡೌನ್ಗಳಿಂದ ತತ್ತರಿಸಿರುವ ಕ್ಷೋಭೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm