ಬ್ರೇಕಿಂಗ್ ನ್ಯೂಸ್
19-06-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 19: ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಹೊಸ ಮಾರ್ಗಸೂಚಿಯ ಪ್ರಕಾರ ಒಂದು ಬೆಂಚ್ನಲ್ಲಿ ಓರ್ವ ವಿದ್ಯಾರ್ಥಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಬಹುಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ.


ಕೋವಿಡ್ ಹಿನ್ನೆಲೆಯಲ್ಲಿ ಆರು ದಿನ ಪರೀಕ್ಷೆ ನಡೆಸಿದರೆ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗುವುದು ಕಷ್ಟವಾಗುತ್ತದೆ. ಹಾಗಾಗಿ ಪ್ರತಿ ಮೂರು ವಿಷಯಕ್ಕೆ ಒಂದೊಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದು. ಒಟ್ಟು ಮೂರು ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು.
3 ಭಾಷಾ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು. ಪರೀಕ್ಷಾ ಸಮಯವನ್ನು ಅಪಹರಾಹ್ನ 10.30ರಿಂದ 1.30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.


ಈ ವರ್ಷ ಪರೀಕ್ಷಾ ಕೇಂದ್ರಗಳನ್ನು ದುಪ್ಪಟ್ಟುಗೊಳಿಸಲಾಗುವುದು. ಒಂದು ಕೊಠಡಿಗೆ ಗರಿಷ್ಠ 12 ವಿದ್ಯಾರ್ಥಿಗಳಂತೆ ಒಂದು ಡೆಸ್ಕ್'ಗೆ ಕೇವಲ ಒಬ್ಬ ವಿದ್ಯಾರ್ಥಿಯಂತೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಈ ಬಾರಿ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ. ಪಾಸಾಗಲು ಅಗತ್ಯ ಕನಿಷ್ಠ ಅಂಕ ನೀಡಲಾಗುವುದು. ಪ್ರತಿ ವಿಷಯದಲ್ಲಿ ವಿದ್ಯಾರ್ಥಿ ಪಡೆದ ಅಂಕಗಳನ್ನು ಗರಿಷ್ಠ 100 ಅಂಕಗಳಿಗೆ ಪರಿವರ್ತಿಸಿ ಫಲಿತಾಂಶ ನೀಡಲಾಗುವುದು. ಅಂಕ ಹಾಗೂ ಗ್ರೇಡ್ ಎರಡೂ ಆಧಾರದಲ್ಲಿ ಫಲಿತಾಂಶ ನೀಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.
ಎಸ್ಎಸ್ಎಲ್'ಸಿಗೆ ನೋಂದಾಯಿಸಿಕೊಂಡಿರುವ 8.77 ಲಕ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಇತರೆ ಸಿಬ್ಬಂದಿ ಸೇರಿ 1 ಲಕ್ಷ ಮಂದಿಗೆ ಎನ್95 ಮಾಸ್ಕ್ ಖರೀದಿಸಿ ನೀಡಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿಧಿಯಿಂದ ಅನುದಾನ ಬಳಕೆಗೆ ಇಲಾಖೆ ಒಪ್ಪಿಗೆ ನೀಡಿದೆ. ಕೋವಿಡ್ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಲಾಗುವುದು ಎಂದಿದೆ.
Karnataka SSLC Exam 2021 Guidelines Released Only One Student for One Bench.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm