ಬ್ರೇಕಿಂಗ್ ನ್ಯೂಸ್
19-06-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 19: ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಹೊಸ ಮಾರ್ಗಸೂಚಿಯ ಪ್ರಕಾರ ಒಂದು ಬೆಂಚ್ನಲ್ಲಿ ಓರ್ವ ವಿದ್ಯಾರ್ಥಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಬಹುಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ.


ಕೋವಿಡ್ ಹಿನ್ನೆಲೆಯಲ್ಲಿ ಆರು ದಿನ ಪರೀಕ್ಷೆ ನಡೆಸಿದರೆ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗುವುದು ಕಷ್ಟವಾಗುತ್ತದೆ. ಹಾಗಾಗಿ ಪ್ರತಿ ಮೂರು ವಿಷಯಕ್ಕೆ ಒಂದೊಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದು. ಒಟ್ಟು ಮೂರು ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು.
3 ಭಾಷಾ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು. ಪರೀಕ್ಷಾ ಸಮಯವನ್ನು ಅಪಹರಾಹ್ನ 10.30ರಿಂದ 1.30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.


ಈ ವರ್ಷ ಪರೀಕ್ಷಾ ಕೇಂದ್ರಗಳನ್ನು ದುಪ್ಪಟ್ಟುಗೊಳಿಸಲಾಗುವುದು. ಒಂದು ಕೊಠಡಿಗೆ ಗರಿಷ್ಠ 12 ವಿದ್ಯಾರ್ಥಿಗಳಂತೆ ಒಂದು ಡೆಸ್ಕ್'ಗೆ ಕೇವಲ ಒಬ್ಬ ವಿದ್ಯಾರ್ಥಿಯಂತೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಈ ಬಾರಿ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ. ಪಾಸಾಗಲು ಅಗತ್ಯ ಕನಿಷ್ಠ ಅಂಕ ನೀಡಲಾಗುವುದು. ಪ್ರತಿ ವಿಷಯದಲ್ಲಿ ವಿದ್ಯಾರ್ಥಿ ಪಡೆದ ಅಂಕಗಳನ್ನು ಗರಿಷ್ಠ 100 ಅಂಕಗಳಿಗೆ ಪರಿವರ್ತಿಸಿ ಫಲಿತಾಂಶ ನೀಡಲಾಗುವುದು. ಅಂಕ ಹಾಗೂ ಗ್ರೇಡ್ ಎರಡೂ ಆಧಾರದಲ್ಲಿ ಫಲಿತಾಂಶ ನೀಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.
ಎಸ್ಎಸ್ಎಲ್'ಸಿಗೆ ನೋಂದಾಯಿಸಿಕೊಂಡಿರುವ 8.77 ಲಕ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಇತರೆ ಸಿಬ್ಬಂದಿ ಸೇರಿ 1 ಲಕ್ಷ ಮಂದಿಗೆ ಎನ್95 ಮಾಸ್ಕ್ ಖರೀದಿಸಿ ನೀಡಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿಧಿಯಿಂದ ಅನುದಾನ ಬಳಕೆಗೆ ಇಲಾಖೆ ಒಪ್ಪಿಗೆ ನೀಡಿದೆ. ಕೋವಿಡ್ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಲಾಗುವುದು ಎಂದಿದೆ.
Karnataka SSLC Exam 2021 Guidelines Released Only One Student for One Bench.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm