ಬ್ರೇಕಿಂಗ್ ನ್ಯೂಸ್
31-08-20 10:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸ್ಯಾಂಡಲ್ವುಡ್ನಲ್ಲಿ ಕೇಳಿ ಬಂದಿದ್ದ ಡ್ರಗ್ಸ್ ದಂಧೆಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಪೊಲೀಸರ ಎದುರು ಹಾಜರಾಗಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ನನಗೆ ತಿಳಿದಿದ್ದ ಮಾಹಿತಿಯ ಬಗ್ಗೆ ಸಾಕ್ಷಿ ಸಮೇತ ಅವರಿಗೆ ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದರು.
ನಿನ್ನೆ ಮೊನ್ನೆ ಬಂದ ಕೆಲ ನಟ, ನಟಿಯರು ಡ್ರಗ್ಸ್ ಗೆ ರಾಯಭಾರಿಗಳಾಗಿದ್ದಾರೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ಹಾನಿಯಾಗಲಿದೆ. ಆದ್ದರಿಂದ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಹಿತಿ ನೀಡಿದ್ದೇನೆ. ಇದರಿಂದ ಇಂಡಸ್ಟ್ರಿಗೆ ಬರುವ ಮುಂಬರುವ ಯುವ ಪೀಳಿಗೆಗೆ ಕೂಡ ಸಂದೇಶ ರವಾನೆಯಾಗಲಿದೆ ಎಂದರು.
ವಿಚಾರಣೆ ಸಂದರ್ಭದಲ್ಲಿ ಒಟ್ಟು 10 ರಿಂದ 15 ಮಂದಿ ಹೆಸರು, ಕೆಲ ಸ್ಥಳಗಳ ಮಾಹಿತಿ, ಆ ಬಗ್ಗೆ ಬೇಕಾದ ದಾಖಲೆಗಳನ್ನು ನೀಡಿದ್ದೇನೆ. ಈಗಾಗಲೇ ಪೊಲೀಸರ ಬಳಿಯೂ ಸಾಕಷ್ಟು ಮಾಹಿತಿ ಇದೆ. ಆದರೆ ನಾನು ಈಗ ಅವರ ಹೆಸರು ಬಹಿರಂಗ ಪಡಿಸಿದರೆ ತನಿಖೆಗೆ ತೊಂದರೆ ಆಗಲಿದೆ. ಸುಮಾರು ಐದೂವರೆ ಗಂಟೆ ಅವಧಿಯಲ್ಲಿ ಹಲವು ಸಾಕ್ಷಿ, ದಾಖಲೆ, ವಿಡಿಯೋಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.
ತಮ್ಮ ಹೇಳಿಕೆಗಳ ವಿರುದ್ಧ ಕೇಳಿ ಬಂದ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್ ಅವರು, ಸಮಾಜದಲ್ಲಿ ಹೆಸರು ಮಾಡಿದ ಸಾಹಿತಿಗಳು, ಗಣ್ಯರನ್ನು ಕರೆಯಿಸಿ ಮಾಧ್ಯಮಗಳು ವರದಿ ಮಾಡಬೇಕು. ಅದನ್ನು ಬಿಟ್ಟು ಸುಪಾರಿ ಕೊಟ್ಟ ವ್ಯಕ್ತಿಗಳ ಹೇಳಿಕೆ ಕೇಳಬೇಡಿ ಎಂದು ಸಲಹೆ ನೀಡಿದರು.
ನಾನು ರಕ್ಷಣೆ ಬೇಕು ಎಂದು ಕೇಳಿಲ್ಲ. ಬೆಂಬಲ ಬೇಕು ಎಂದು ಕೇಳಿದ್ದೇನೆ. ನಾನು ಈಗ ಪೊಲೀಸರಿಗೆ ಮಾಹಿತಿ ನೀಡಿರುವುದರಿಂದ ಅವರಿಗೆ ಖುಷಿ ಆಗಿದೆ. ಶೀಘ್ರವೇ ಅಧಿಕಾರಿಗಳು ಈ ಬಗ್ಗೆ ತನಿಖೆ ಸಮೇತ ಹೆಸರು ಬಹಿರಂಗಪಡಿಸಲಿದ್ದಾರೆ. ನನಗೆ ಯಾವುದೇ ನಟರು, ರಾಜಕಾರಣಿಗಳ ಮಕ್ಕಳ ಬಗ್ಗೆ ಹೆದರಿಕೆ ಇಲ್ಲ. ನಾನು ಈ ಬಗ್ಗೆ ಸಾಕಷ್ಟು ತನಿಖೆ ನಡೆಸಿದ್ದು, ಆ ವೇಳೆ ಲಭ್ಯವಾದ ಕೆಲ ವಿಡಿಯೋ, ದಾಖಲೆಗಳನ್ನು ನೀಡಿದ್ದೇನೆ. ನನಗೆ ಯಾರು ಒತ್ತಡ ಹಾಕುತ್ತಿಲ್ಲ. ಹಲವು ನಿರ್ಮಾಪಕರು, ನಟರು, ರಾಜಕಾರಣಿಗಳು, ಸಾಮಾನ್ಯ ಜನರು ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಧನ್ಯವಾದ ಎಂದರು.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
13-03-25 09:20 pm
Mangalore Correspondent
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
Diganth Missing case, Reunite with family: 17...
12-03-25 10:16 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm