ಬ್ರೇಕಿಂಗ್ ನ್ಯೂಸ್
31-08-20 10:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸ್ಯಾಂಡಲ್ವುಡ್ನಲ್ಲಿ ಕೇಳಿ ಬಂದಿದ್ದ ಡ್ರಗ್ಸ್ ದಂಧೆಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಪೊಲೀಸರ ಎದುರು ಹಾಜರಾಗಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ನನಗೆ ತಿಳಿದಿದ್ದ ಮಾಹಿತಿಯ ಬಗ್ಗೆ ಸಾಕ್ಷಿ ಸಮೇತ ಅವರಿಗೆ ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದರು.
ನಿನ್ನೆ ಮೊನ್ನೆ ಬಂದ ಕೆಲ ನಟ, ನಟಿಯರು ಡ್ರಗ್ಸ್ ಗೆ ರಾಯಭಾರಿಗಳಾಗಿದ್ದಾರೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ಹಾನಿಯಾಗಲಿದೆ. ಆದ್ದರಿಂದ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಹಿತಿ ನೀಡಿದ್ದೇನೆ. ಇದರಿಂದ ಇಂಡಸ್ಟ್ರಿಗೆ ಬರುವ ಮುಂಬರುವ ಯುವ ಪೀಳಿಗೆಗೆ ಕೂಡ ಸಂದೇಶ ರವಾನೆಯಾಗಲಿದೆ ಎಂದರು.
ವಿಚಾರಣೆ ಸಂದರ್ಭದಲ್ಲಿ ಒಟ್ಟು 10 ರಿಂದ 15 ಮಂದಿ ಹೆಸರು, ಕೆಲ ಸ್ಥಳಗಳ ಮಾಹಿತಿ, ಆ ಬಗ್ಗೆ ಬೇಕಾದ ದಾಖಲೆಗಳನ್ನು ನೀಡಿದ್ದೇನೆ. ಈಗಾಗಲೇ ಪೊಲೀಸರ ಬಳಿಯೂ ಸಾಕಷ್ಟು ಮಾಹಿತಿ ಇದೆ. ಆದರೆ ನಾನು ಈಗ ಅವರ ಹೆಸರು ಬಹಿರಂಗ ಪಡಿಸಿದರೆ ತನಿಖೆಗೆ ತೊಂದರೆ ಆಗಲಿದೆ. ಸುಮಾರು ಐದೂವರೆ ಗಂಟೆ ಅವಧಿಯಲ್ಲಿ ಹಲವು ಸಾಕ್ಷಿ, ದಾಖಲೆ, ವಿಡಿಯೋಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.
ತಮ್ಮ ಹೇಳಿಕೆಗಳ ವಿರುದ್ಧ ಕೇಳಿ ಬಂದ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್ ಅವರು, ಸಮಾಜದಲ್ಲಿ ಹೆಸರು ಮಾಡಿದ ಸಾಹಿತಿಗಳು, ಗಣ್ಯರನ್ನು ಕರೆಯಿಸಿ ಮಾಧ್ಯಮಗಳು ವರದಿ ಮಾಡಬೇಕು. ಅದನ್ನು ಬಿಟ್ಟು ಸುಪಾರಿ ಕೊಟ್ಟ ವ್ಯಕ್ತಿಗಳ ಹೇಳಿಕೆ ಕೇಳಬೇಡಿ ಎಂದು ಸಲಹೆ ನೀಡಿದರು.
ನಾನು ರಕ್ಷಣೆ ಬೇಕು ಎಂದು ಕೇಳಿಲ್ಲ. ಬೆಂಬಲ ಬೇಕು ಎಂದು ಕೇಳಿದ್ದೇನೆ. ನಾನು ಈಗ ಪೊಲೀಸರಿಗೆ ಮಾಹಿತಿ ನೀಡಿರುವುದರಿಂದ ಅವರಿಗೆ ಖುಷಿ ಆಗಿದೆ. ಶೀಘ್ರವೇ ಅಧಿಕಾರಿಗಳು ಈ ಬಗ್ಗೆ ತನಿಖೆ ಸಮೇತ ಹೆಸರು ಬಹಿರಂಗಪಡಿಸಲಿದ್ದಾರೆ. ನನಗೆ ಯಾವುದೇ ನಟರು, ರಾಜಕಾರಣಿಗಳ ಮಕ್ಕಳ ಬಗ್ಗೆ ಹೆದರಿಕೆ ಇಲ್ಲ. ನಾನು ಈ ಬಗ್ಗೆ ಸಾಕಷ್ಟು ತನಿಖೆ ನಡೆಸಿದ್ದು, ಆ ವೇಳೆ ಲಭ್ಯವಾದ ಕೆಲ ವಿಡಿಯೋ, ದಾಖಲೆಗಳನ್ನು ನೀಡಿದ್ದೇನೆ. ನನಗೆ ಯಾರು ಒತ್ತಡ ಹಾಕುತ್ತಿಲ್ಲ. ಹಲವು ನಿರ್ಮಾಪಕರು, ನಟರು, ರಾಜಕಾರಣಿಗಳು, ಸಾಮಾನ್ಯ ಜನರು ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಧನ್ಯವಾದ ಎಂದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm