ಬ್ರೇಕಿಂಗ್ ನ್ಯೂಸ್
31-08-20 10:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸ್ಯಾಂಡಲ್ವುಡ್ನಲ್ಲಿ ಕೇಳಿ ಬಂದಿದ್ದ ಡ್ರಗ್ಸ್ ದಂಧೆಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಪೊಲೀಸರ ಎದುರು ಹಾಜರಾಗಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ನನಗೆ ತಿಳಿದಿದ್ದ ಮಾಹಿತಿಯ ಬಗ್ಗೆ ಸಾಕ್ಷಿ ಸಮೇತ ಅವರಿಗೆ ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದರು.
ನಿನ್ನೆ ಮೊನ್ನೆ ಬಂದ ಕೆಲ ನಟ, ನಟಿಯರು ಡ್ರಗ್ಸ್ ಗೆ ರಾಯಭಾರಿಗಳಾಗಿದ್ದಾರೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ಹಾನಿಯಾಗಲಿದೆ. ಆದ್ದರಿಂದ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಹಿತಿ ನೀಡಿದ್ದೇನೆ. ಇದರಿಂದ ಇಂಡಸ್ಟ್ರಿಗೆ ಬರುವ ಮುಂಬರುವ ಯುವ ಪೀಳಿಗೆಗೆ ಕೂಡ ಸಂದೇಶ ರವಾನೆಯಾಗಲಿದೆ ಎಂದರು.
ವಿಚಾರಣೆ ಸಂದರ್ಭದಲ್ಲಿ ಒಟ್ಟು 10 ರಿಂದ 15 ಮಂದಿ ಹೆಸರು, ಕೆಲ ಸ್ಥಳಗಳ ಮಾಹಿತಿ, ಆ ಬಗ್ಗೆ ಬೇಕಾದ ದಾಖಲೆಗಳನ್ನು ನೀಡಿದ್ದೇನೆ. ಈಗಾಗಲೇ ಪೊಲೀಸರ ಬಳಿಯೂ ಸಾಕಷ್ಟು ಮಾಹಿತಿ ಇದೆ. ಆದರೆ ನಾನು ಈಗ ಅವರ ಹೆಸರು ಬಹಿರಂಗ ಪಡಿಸಿದರೆ ತನಿಖೆಗೆ ತೊಂದರೆ ಆಗಲಿದೆ. ಸುಮಾರು ಐದೂವರೆ ಗಂಟೆ ಅವಧಿಯಲ್ಲಿ ಹಲವು ಸಾಕ್ಷಿ, ದಾಖಲೆ, ವಿಡಿಯೋಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.
ತಮ್ಮ ಹೇಳಿಕೆಗಳ ವಿರುದ್ಧ ಕೇಳಿ ಬಂದ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್ ಅವರು, ಸಮಾಜದಲ್ಲಿ ಹೆಸರು ಮಾಡಿದ ಸಾಹಿತಿಗಳು, ಗಣ್ಯರನ್ನು ಕರೆಯಿಸಿ ಮಾಧ್ಯಮಗಳು ವರದಿ ಮಾಡಬೇಕು. ಅದನ್ನು ಬಿಟ್ಟು ಸುಪಾರಿ ಕೊಟ್ಟ ವ್ಯಕ್ತಿಗಳ ಹೇಳಿಕೆ ಕೇಳಬೇಡಿ ಎಂದು ಸಲಹೆ ನೀಡಿದರು.
ನಾನು ರಕ್ಷಣೆ ಬೇಕು ಎಂದು ಕೇಳಿಲ್ಲ. ಬೆಂಬಲ ಬೇಕು ಎಂದು ಕೇಳಿದ್ದೇನೆ. ನಾನು ಈಗ ಪೊಲೀಸರಿಗೆ ಮಾಹಿತಿ ನೀಡಿರುವುದರಿಂದ ಅವರಿಗೆ ಖುಷಿ ಆಗಿದೆ. ಶೀಘ್ರವೇ ಅಧಿಕಾರಿಗಳು ಈ ಬಗ್ಗೆ ತನಿಖೆ ಸಮೇತ ಹೆಸರು ಬಹಿರಂಗಪಡಿಸಲಿದ್ದಾರೆ. ನನಗೆ ಯಾವುದೇ ನಟರು, ರಾಜಕಾರಣಿಗಳ ಮಕ್ಕಳ ಬಗ್ಗೆ ಹೆದರಿಕೆ ಇಲ್ಲ. ನಾನು ಈ ಬಗ್ಗೆ ಸಾಕಷ್ಟು ತನಿಖೆ ನಡೆಸಿದ್ದು, ಆ ವೇಳೆ ಲಭ್ಯವಾದ ಕೆಲ ವಿಡಿಯೋ, ದಾಖಲೆಗಳನ್ನು ನೀಡಿದ್ದೇನೆ. ನನಗೆ ಯಾರು ಒತ್ತಡ ಹಾಕುತ್ತಿಲ್ಲ. ಹಲವು ನಿರ್ಮಾಪಕರು, ನಟರು, ರಾಜಕಾರಣಿಗಳು, ಸಾಮಾನ್ಯ ಜನರು ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಧನ್ಯವಾದ ಎಂದರು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm