ಬ್ರೇಕಿಂಗ್ ನ್ಯೂಸ್
31-08-20 10:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸ್ಯಾಂಡಲ್ವುಡ್ನಲ್ಲಿ ಕೇಳಿ ಬಂದಿದ್ದ ಡ್ರಗ್ಸ್ ದಂಧೆಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಪೊಲೀಸರ ಎದುರು ಹಾಜರಾಗಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ನನಗೆ ತಿಳಿದಿದ್ದ ಮಾಹಿತಿಯ ಬಗ್ಗೆ ಸಾಕ್ಷಿ ಸಮೇತ ಅವರಿಗೆ ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದರು.
ನಿನ್ನೆ ಮೊನ್ನೆ ಬಂದ ಕೆಲ ನಟ, ನಟಿಯರು ಡ್ರಗ್ಸ್ ಗೆ ರಾಯಭಾರಿಗಳಾಗಿದ್ದಾರೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ಹಾನಿಯಾಗಲಿದೆ. ಆದ್ದರಿಂದ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಹಿತಿ ನೀಡಿದ್ದೇನೆ. ಇದರಿಂದ ಇಂಡಸ್ಟ್ರಿಗೆ ಬರುವ ಮುಂಬರುವ ಯುವ ಪೀಳಿಗೆಗೆ ಕೂಡ ಸಂದೇಶ ರವಾನೆಯಾಗಲಿದೆ ಎಂದರು.
ವಿಚಾರಣೆ ಸಂದರ್ಭದಲ್ಲಿ ಒಟ್ಟು 10 ರಿಂದ 15 ಮಂದಿ ಹೆಸರು, ಕೆಲ ಸ್ಥಳಗಳ ಮಾಹಿತಿ, ಆ ಬಗ್ಗೆ ಬೇಕಾದ ದಾಖಲೆಗಳನ್ನು ನೀಡಿದ್ದೇನೆ. ಈಗಾಗಲೇ ಪೊಲೀಸರ ಬಳಿಯೂ ಸಾಕಷ್ಟು ಮಾಹಿತಿ ಇದೆ. ಆದರೆ ನಾನು ಈಗ ಅವರ ಹೆಸರು ಬಹಿರಂಗ ಪಡಿಸಿದರೆ ತನಿಖೆಗೆ ತೊಂದರೆ ಆಗಲಿದೆ. ಸುಮಾರು ಐದೂವರೆ ಗಂಟೆ ಅವಧಿಯಲ್ಲಿ ಹಲವು ಸಾಕ್ಷಿ, ದಾಖಲೆ, ವಿಡಿಯೋಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.
ತಮ್ಮ ಹೇಳಿಕೆಗಳ ವಿರುದ್ಧ ಕೇಳಿ ಬಂದ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್ ಅವರು, ಸಮಾಜದಲ್ಲಿ ಹೆಸರು ಮಾಡಿದ ಸಾಹಿತಿಗಳು, ಗಣ್ಯರನ್ನು ಕರೆಯಿಸಿ ಮಾಧ್ಯಮಗಳು ವರದಿ ಮಾಡಬೇಕು. ಅದನ್ನು ಬಿಟ್ಟು ಸುಪಾರಿ ಕೊಟ್ಟ ವ್ಯಕ್ತಿಗಳ ಹೇಳಿಕೆ ಕೇಳಬೇಡಿ ಎಂದು ಸಲಹೆ ನೀಡಿದರು.
ನಾನು ರಕ್ಷಣೆ ಬೇಕು ಎಂದು ಕೇಳಿಲ್ಲ. ಬೆಂಬಲ ಬೇಕು ಎಂದು ಕೇಳಿದ್ದೇನೆ. ನಾನು ಈಗ ಪೊಲೀಸರಿಗೆ ಮಾಹಿತಿ ನೀಡಿರುವುದರಿಂದ ಅವರಿಗೆ ಖುಷಿ ಆಗಿದೆ. ಶೀಘ್ರವೇ ಅಧಿಕಾರಿಗಳು ಈ ಬಗ್ಗೆ ತನಿಖೆ ಸಮೇತ ಹೆಸರು ಬಹಿರಂಗಪಡಿಸಲಿದ್ದಾರೆ. ನನಗೆ ಯಾವುದೇ ನಟರು, ರಾಜಕಾರಣಿಗಳ ಮಕ್ಕಳ ಬಗ್ಗೆ ಹೆದರಿಕೆ ಇಲ್ಲ. ನಾನು ಈ ಬಗ್ಗೆ ಸಾಕಷ್ಟು ತನಿಖೆ ನಡೆಸಿದ್ದು, ಆ ವೇಳೆ ಲಭ್ಯವಾದ ಕೆಲ ವಿಡಿಯೋ, ದಾಖಲೆಗಳನ್ನು ನೀಡಿದ್ದೇನೆ. ನನಗೆ ಯಾರು ಒತ್ತಡ ಹಾಕುತ್ತಿಲ್ಲ. ಹಲವು ನಿರ್ಮಾಪಕರು, ನಟರು, ರಾಜಕಾರಣಿಗಳು, ಸಾಮಾನ್ಯ ಜನರು ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಧನ್ಯವಾದ ಎಂದರು.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm