ಬ್ರೇಕಿಂಗ್ ನ್ಯೂಸ್
31-08-20 10:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸ್ಯಾಂಡಲ್ವುಡ್ನಲ್ಲಿ ಕೇಳಿ ಬಂದಿದ್ದ ಡ್ರಗ್ಸ್ ದಂಧೆಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಪೊಲೀಸರ ಎದುರು ಹಾಜರಾಗಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ನನಗೆ ತಿಳಿದಿದ್ದ ಮಾಹಿತಿಯ ಬಗ್ಗೆ ಸಾಕ್ಷಿ ಸಮೇತ ಅವರಿಗೆ ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದರು.
ನಿನ್ನೆ ಮೊನ್ನೆ ಬಂದ ಕೆಲ ನಟ, ನಟಿಯರು ಡ್ರಗ್ಸ್ ಗೆ ರಾಯಭಾರಿಗಳಾಗಿದ್ದಾರೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ಹಾನಿಯಾಗಲಿದೆ. ಆದ್ದರಿಂದ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಹಿತಿ ನೀಡಿದ್ದೇನೆ. ಇದರಿಂದ ಇಂಡಸ್ಟ್ರಿಗೆ ಬರುವ ಮುಂಬರುವ ಯುವ ಪೀಳಿಗೆಗೆ ಕೂಡ ಸಂದೇಶ ರವಾನೆಯಾಗಲಿದೆ ಎಂದರು.
ವಿಚಾರಣೆ ಸಂದರ್ಭದಲ್ಲಿ ಒಟ್ಟು 10 ರಿಂದ 15 ಮಂದಿ ಹೆಸರು, ಕೆಲ ಸ್ಥಳಗಳ ಮಾಹಿತಿ, ಆ ಬಗ್ಗೆ ಬೇಕಾದ ದಾಖಲೆಗಳನ್ನು ನೀಡಿದ್ದೇನೆ. ಈಗಾಗಲೇ ಪೊಲೀಸರ ಬಳಿಯೂ ಸಾಕಷ್ಟು ಮಾಹಿತಿ ಇದೆ. ಆದರೆ ನಾನು ಈಗ ಅವರ ಹೆಸರು ಬಹಿರಂಗ ಪಡಿಸಿದರೆ ತನಿಖೆಗೆ ತೊಂದರೆ ಆಗಲಿದೆ. ಸುಮಾರು ಐದೂವರೆ ಗಂಟೆ ಅವಧಿಯಲ್ಲಿ ಹಲವು ಸಾಕ್ಷಿ, ದಾಖಲೆ, ವಿಡಿಯೋಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.
ತಮ್ಮ ಹೇಳಿಕೆಗಳ ವಿರುದ್ಧ ಕೇಳಿ ಬಂದ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್ ಅವರು, ಸಮಾಜದಲ್ಲಿ ಹೆಸರು ಮಾಡಿದ ಸಾಹಿತಿಗಳು, ಗಣ್ಯರನ್ನು ಕರೆಯಿಸಿ ಮಾಧ್ಯಮಗಳು ವರದಿ ಮಾಡಬೇಕು. ಅದನ್ನು ಬಿಟ್ಟು ಸುಪಾರಿ ಕೊಟ್ಟ ವ್ಯಕ್ತಿಗಳ ಹೇಳಿಕೆ ಕೇಳಬೇಡಿ ಎಂದು ಸಲಹೆ ನೀಡಿದರು.
ನಾನು ರಕ್ಷಣೆ ಬೇಕು ಎಂದು ಕೇಳಿಲ್ಲ. ಬೆಂಬಲ ಬೇಕು ಎಂದು ಕೇಳಿದ್ದೇನೆ. ನಾನು ಈಗ ಪೊಲೀಸರಿಗೆ ಮಾಹಿತಿ ನೀಡಿರುವುದರಿಂದ ಅವರಿಗೆ ಖುಷಿ ಆಗಿದೆ. ಶೀಘ್ರವೇ ಅಧಿಕಾರಿಗಳು ಈ ಬಗ್ಗೆ ತನಿಖೆ ಸಮೇತ ಹೆಸರು ಬಹಿರಂಗಪಡಿಸಲಿದ್ದಾರೆ. ನನಗೆ ಯಾವುದೇ ನಟರು, ರಾಜಕಾರಣಿಗಳ ಮಕ್ಕಳ ಬಗ್ಗೆ ಹೆದರಿಕೆ ಇಲ್ಲ. ನಾನು ಈ ಬಗ್ಗೆ ಸಾಕಷ್ಟು ತನಿಖೆ ನಡೆಸಿದ್ದು, ಆ ವೇಳೆ ಲಭ್ಯವಾದ ಕೆಲ ವಿಡಿಯೋ, ದಾಖಲೆಗಳನ್ನು ನೀಡಿದ್ದೇನೆ. ನನಗೆ ಯಾರು ಒತ್ತಡ ಹಾಕುತ್ತಿಲ್ಲ. ಹಲವು ನಿರ್ಮಾಪಕರು, ನಟರು, ರಾಜಕಾರಣಿಗಳು, ಸಾಮಾನ್ಯ ಜನರು ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಧನ್ಯವಾದ ಎಂದರು.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm