ಬ್ರೇಕಿಂಗ್ ನ್ಯೂಸ್
23-06-21 04:40 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 23: ರಾಜ್ಯದಲ್ಲಿಯೂ ಕೊರೊನಾ ವೈರಸಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ಪತ್ತೆಯಾಗಿದೆ ಎಂದು ಹೇಳಿಕೆ ನೀಡಿ ಆರೋಗ್ಯ ಸಚಿವ ಡಾ.ಸುಧಾಕರ್ ಆತಂಕ ಎಬ್ಬಿಸಿರುವ ಬೆನ್ನಲ್ಲೇ ಮೈಸೂರಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪ್ರಸಾದ್, ಡೆಲ್ಟಾ ಪ್ಲಸ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಡೆಲ್ಟಾ ಪ್ಲಸ್ ಪತ್ತೆಯಾಗಿರುವುದು ಮೇ ತಿಂಗಳ ಸ್ಯಾಂಪಲ್ ನಲ್ಲಿ. ಸೋಂಕಿತ ವ್ಯಕ್ತಿ ಆಗಲೇ ಗುಣಮುಖರಾಗಿ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ನಿತ್ಯವೂ ಸಾವಿರಾರು ಸ್ವಾಬ್ ತೆಗೆಯುತ್ತೇವೆ. ಈ ಪೈಕಿ ಪ್ರತಿ ತಿಂಗಳಲ್ಲೂ ವಿಶೇಷವಾಗಿ ಕಂಡ 40 ಸ್ಯಾಂಪಲ್ಗಳನ್ನು ರ್ಯಾಂಡಮ್ ಆಗಿ ಆಯ್ಕೆ ಮಾಡಿ ಬೆಂಗಳೂರಿನ ಲ್ಯಾಬ್ ಗೆ ಕಳುಹಿಸುತ್ತೇವೆ. ಮೇ ತಿಂಗಳಲ್ಲಿ ಬೆಂಗಳೂರಿನ ನಿಮ್ಹಾನ್ಸ್ಗೆ ಕಳುಹಿಸಿದ್ದ ಸ್ಯಾಂಪಲ್ನಲ್ಲಿ ಡೆಲ್ಟಾ ಪ್ಲಸ್ ಕಂಡುಬಂದಿದೆ. ಒಂದು ಕೇಸ್ ಕಂಡು ಬಂದಿರುವುದನ್ನೇ ಆರೋಗ್ಯ ಸಚಿವರು ಮತ್ತು ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವರು ಘೋಷಣೆ ಮಾಡಿದ್ದಾರೆ.

ಈಗಾಗಲೇ ಸೋಂಕಿತ ವ್ಯಕ್ತಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಡೆಲ್ಟಾ ಪ್ಲಸ್ ಕರೊನಾದ ಮತ್ತೊಂದು ರೂಪಾಂತರ ಅಷ್ಟೆ. ಇದನ್ನು ಮೂರನೇ ಅಲೆ ಅಂತ ಭಾವಿಸಬೇಕಿಲ್ಲ. ಮೈಸೂರು ಜಿಲ್ಲೆಯಲ್ಲಿ 36 ಲಕ್ಷ ಜನಸಂಖ್ಯೆ ಇದೆ. ಇದುವರೆಗೆ 16 ಲಕ್ಷ ಜನರನ್ನು ಟೆಸ್ಟ್ ಮಾಡಿದ್ದೇವೆ.
ಈ ಪೈಕಿ 1.63 ಲಕ್ಷ ಪಾಸಿಟಿವ್ ಕೇಸ್ ಬಂದಿದೆ. ಈಗ ಕರೊನಾ ನಿಯಂತ್ರಣದಲ್ಲಿದೆ ಎಂದು ಡಿಎಚ್ಓ ಡಾ.ಪ್ರಸಾದ್ ಹೇಳಿದ್ದಾರೆ.
ಮಕ್ಕಳಲ್ಲಿ ಅತಿ ಹೆಚ್ಚು ಕೇಸ್ ಬರುತ್ತಿದೆ ಎನ್ನುವುದೂ ಸುಳ್ಳು ವರದಿ. ನಾನು 16 ತಿಂಗಳ ಅಂಕಿ ಅಂಶಗಳನ್ನೂ ಪರಿಶೀಲನೆ ಮಾಡಿದ್ದೇನೆ. ಆ ರೀತಿಯ ಅಂಶ ಕಂಡುಬಂದಿಲ್ಲ. ಕೊರೊನಾ ಸೋಂಕಿನ ಮೂರನೇ ಅಲೆ ಶುರುವಾಗಿದೆ ಅನ್ನೋದು ಕೇವಲ ಊಹಾಪೋಹ ಎಂದು ಮೈಸೂರು ಡಿಎಚ್ಒ ಡಾ.ಪ್ರಸಾದ್ ಹೇಳಿದ್ದಾರೆ.
Delta Plus Variant Cases not Found in Karnataka Health minster in trouble. Mysore DHO clarifies that two new cases of the Delta Plus variant of coronavirus have not been found in Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm