ಬ್ರೇಕಿಂಗ್ ನ್ಯೂಸ್
23-06-21 04:40 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 23: ರಾಜ್ಯದಲ್ಲಿಯೂ ಕೊರೊನಾ ವೈರಸಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ಪತ್ತೆಯಾಗಿದೆ ಎಂದು ಹೇಳಿಕೆ ನೀಡಿ ಆರೋಗ್ಯ ಸಚಿವ ಡಾ.ಸುಧಾಕರ್ ಆತಂಕ ಎಬ್ಬಿಸಿರುವ ಬೆನ್ನಲ್ಲೇ ಮೈಸೂರಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪ್ರಸಾದ್, ಡೆಲ್ಟಾ ಪ್ಲಸ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಡೆಲ್ಟಾ ಪ್ಲಸ್ ಪತ್ತೆಯಾಗಿರುವುದು ಮೇ ತಿಂಗಳ ಸ್ಯಾಂಪಲ್ ನಲ್ಲಿ. ಸೋಂಕಿತ ವ್ಯಕ್ತಿ ಆಗಲೇ ಗುಣಮುಖರಾಗಿ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.
ನಿತ್ಯವೂ ಸಾವಿರಾರು ಸ್ವಾಬ್ ತೆಗೆಯುತ್ತೇವೆ. ಈ ಪೈಕಿ ಪ್ರತಿ ತಿಂಗಳಲ್ಲೂ ವಿಶೇಷವಾಗಿ ಕಂಡ 40 ಸ್ಯಾಂಪಲ್ಗಳನ್ನು ರ್ಯಾಂಡಮ್ ಆಗಿ ಆಯ್ಕೆ ಮಾಡಿ ಬೆಂಗಳೂರಿನ ಲ್ಯಾಬ್ ಗೆ ಕಳುಹಿಸುತ್ತೇವೆ. ಮೇ ತಿಂಗಳಲ್ಲಿ ಬೆಂಗಳೂರಿನ ನಿಮ್ಹಾನ್ಸ್ಗೆ ಕಳುಹಿಸಿದ್ದ ಸ್ಯಾಂಪಲ್ನಲ್ಲಿ ಡೆಲ್ಟಾ ಪ್ಲಸ್ ಕಂಡುಬಂದಿದೆ. ಒಂದು ಕೇಸ್ ಕಂಡು ಬಂದಿರುವುದನ್ನೇ ಆರೋಗ್ಯ ಸಚಿವರು ಮತ್ತು ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವರು ಘೋಷಣೆ ಮಾಡಿದ್ದಾರೆ.
ಈಗಾಗಲೇ ಸೋಂಕಿತ ವ್ಯಕ್ತಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಡೆಲ್ಟಾ ಪ್ಲಸ್ ಕರೊನಾದ ಮತ್ತೊಂದು ರೂಪಾಂತರ ಅಷ್ಟೆ. ಇದನ್ನು ಮೂರನೇ ಅಲೆ ಅಂತ ಭಾವಿಸಬೇಕಿಲ್ಲ. ಮೈಸೂರು ಜಿಲ್ಲೆಯಲ್ಲಿ 36 ಲಕ್ಷ ಜನಸಂಖ್ಯೆ ಇದೆ. ಇದುವರೆಗೆ 16 ಲಕ್ಷ ಜನರನ್ನು ಟೆಸ್ಟ್ ಮಾಡಿದ್ದೇವೆ.
ಈ ಪೈಕಿ 1.63 ಲಕ್ಷ ಪಾಸಿಟಿವ್ ಕೇಸ್ ಬಂದಿದೆ. ಈಗ ಕರೊನಾ ನಿಯಂತ್ರಣದಲ್ಲಿದೆ ಎಂದು ಡಿಎಚ್ಓ ಡಾ.ಪ್ರಸಾದ್ ಹೇಳಿದ್ದಾರೆ.
ಮಕ್ಕಳಲ್ಲಿ ಅತಿ ಹೆಚ್ಚು ಕೇಸ್ ಬರುತ್ತಿದೆ ಎನ್ನುವುದೂ ಸುಳ್ಳು ವರದಿ. ನಾನು 16 ತಿಂಗಳ ಅಂಕಿ ಅಂಶಗಳನ್ನೂ ಪರಿಶೀಲನೆ ಮಾಡಿದ್ದೇನೆ. ಆ ರೀತಿಯ ಅಂಶ ಕಂಡುಬಂದಿಲ್ಲ. ಕೊರೊನಾ ಸೋಂಕಿನ ಮೂರನೇ ಅಲೆ ಶುರುವಾಗಿದೆ ಅನ್ನೋದು ಕೇವಲ ಊಹಾಪೋಹ ಎಂದು ಮೈಸೂರು ಡಿಎಚ್ಒ ಡಾ.ಪ್ರಸಾದ್ ಹೇಳಿದ್ದಾರೆ.
Delta Plus Variant Cases not Found in Karnataka Health minster in trouble. Mysore DHO clarifies that two new cases of the Delta Plus variant of coronavirus have not been found in Karnataka.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm