ಬ್ರೇಕಿಂಗ್ ನ್ಯೂಸ್
25-06-21 04:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25; ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಎನ್. ಆರ್. ಮೊಹಲ್ಲಾ ನಿವಾಸಿ ಕಾರ್ತಿಕ್ (30) ಮೃತ ಯುವಕ. ವೃತ್ತಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಮಂಡ್ಯದ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ತಂದೆ- ತಾಯಿಯನ್ನು ಕಳಕೊಂಡಿದ್ದ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದ. ಕೆಲಸ ಗಿಟ್ಟಿಸಿಕೊಂಡ ಬಳಿಕ ಎನ್.ಆರ್. ಮೊಹಲ್ಲಾದಲ್ಲಿ ಬಾಡಿಗೆ ರೂಂನಲ್ಲಿ ವಾಸವಿದ್ದ. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, 'ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ' ಎಂದು ಬರೆದಿದ್ದಾನೆ.

3ನೇ ಬಾರಿ ಆತ್ಮಹತ್ಯೆ ಯತ್ನದಲ್ಲಿ ಸಾವು !
ಕಾರ್ತಿಕ್ ತಾಯಿ ಪಾರ್ವತಮ್ಮ 21 ವರ್ಷಗಳ ಹಿಂದೆ ತೀರಿಕೊಂಡಿದ್ದರು. ಕೌಟುಂಬಿಕ ಕಲಹದಲ್ಲಿ ತಂದೆಯೇ ತಾಯಿಯನ್ನು ಕೊಲೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ 14 ವರ್ಷಗಳ ಹಿಂದೆ ತಂದೆ ಶಿವನಂಜಯ್ಯ ಸಹ ಕುಡಿತದಿಂದ ಸಾವನ್ನಪ್ಪಿದ್ದರು. ಘಟನೆಯಿಂದ ಬೇಸತ್ತಿದ್ದ ಯುವಕ ತಾಯಿ ಸಾವನ್ನಪ್ಪಿದ ದಿನವೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು ಬಳಿಕ ಸ್ನೇಹಿತರ ನೆರವಿನಿಂದ ಬಚಾವಾಗಿದ್ದ. ಆನಂತರ ತಂದೆ ಸಾವನ್ನಪ್ಪಿದ ದಿನವೂ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ, ಸಾವಿನಿಂದ ಬಚಾವಾಗಿದ್ದ. ಆದರೆ, ಮೂರನೇ ಬಾರಿಯ ಯತ್ನದಲ್ಲಿ ಪ್ರಾಣ ಪಕ್ಷಿಯೇ ಹೋಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-year-old man Commits suicide in Mysore on his Birthday with a death note. The deceased has been identified as Karthik (30).
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm