ಬ್ರೇಕಿಂಗ್ ನ್ಯೂಸ್
25-06-21 04:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25; ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಎನ್. ಆರ್. ಮೊಹಲ್ಲಾ ನಿವಾಸಿ ಕಾರ್ತಿಕ್ (30) ಮೃತ ಯುವಕ. ವೃತ್ತಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಮಂಡ್ಯದ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ತಂದೆ- ತಾಯಿಯನ್ನು ಕಳಕೊಂಡಿದ್ದ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದ. ಕೆಲಸ ಗಿಟ್ಟಿಸಿಕೊಂಡ ಬಳಿಕ ಎನ್.ಆರ್. ಮೊಹಲ್ಲಾದಲ್ಲಿ ಬಾಡಿಗೆ ರೂಂನಲ್ಲಿ ವಾಸವಿದ್ದ. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, 'ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ' ಎಂದು ಬರೆದಿದ್ದಾನೆ.
3ನೇ ಬಾರಿ ಆತ್ಮಹತ್ಯೆ ಯತ್ನದಲ್ಲಿ ಸಾವು !
ಕಾರ್ತಿಕ್ ತಾಯಿ ಪಾರ್ವತಮ್ಮ 21 ವರ್ಷಗಳ ಹಿಂದೆ ತೀರಿಕೊಂಡಿದ್ದರು. ಕೌಟುಂಬಿಕ ಕಲಹದಲ್ಲಿ ತಂದೆಯೇ ತಾಯಿಯನ್ನು ಕೊಲೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ 14 ವರ್ಷಗಳ ಹಿಂದೆ ತಂದೆ ಶಿವನಂಜಯ್ಯ ಸಹ ಕುಡಿತದಿಂದ ಸಾವನ್ನಪ್ಪಿದ್ದರು. ಘಟನೆಯಿಂದ ಬೇಸತ್ತಿದ್ದ ಯುವಕ ತಾಯಿ ಸಾವನ್ನಪ್ಪಿದ ದಿನವೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು ಬಳಿಕ ಸ್ನೇಹಿತರ ನೆರವಿನಿಂದ ಬಚಾವಾಗಿದ್ದ. ಆನಂತರ ತಂದೆ ಸಾವನ್ನಪ್ಪಿದ ದಿನವೂ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ, ಸಾವಿನಿಂದ ಬಚಾವಾಗಿದ್ದ. ಆದರೆ, ಮೂರನೇ ಬಾರಿಯ ಯತ್ನದಲ್ಲಿ ಪ್ರಾಣ ಪಕ್ಷಿಯೇ ಹೋಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-year-old man Commits suicide in Mysore on his Birthday with a death note. The deceased has been identified as Karthik (30).
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm