ಬ್ರೇಕಿಂಗ್ ನ್ಯೂಸ್
25-06-21 04:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25; ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಎನ್. ಆರ್. ಮೊಹಲ್ಲಾ ನಿವಾಸಿ ಕಾರ್ತಿಕ್ (30) ಮೃತ ಯುವಕ. ವೃತ್ತಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಮಂಡ್ಯದ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ತಂದೆ- ತಾಯಿಯನ್ನು ಕಳಕೊಂಡಿದ್ದ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದ. ಕೆಲಸ ಗಿಟ್ಟಿಸಿಕೊಂಡ ಬಳಿಕ ಎನ್.ಆರ್. ಮೊಹಲ್ಲಾದಲ್ಲಿ ಬಾಡಿಗೆ ರೂಂನಲ್ಲಿ ವಾಸವಿದ್ದ. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, 'ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ' ಎಂದು ಬರೆದಿದ್ದಾನೆ.

3ನೇ ಬಾರಿ ಆತ್ಮಹತ್ಯೆ ಯತ್ನದಲ್ಲಿ ಸಾವು !
ಕಾರ್ತಿಕ್ ತಾಯಿ ಪಾರ್ವತಮ್ಮ 21 ವರ್ಷಗಳ ಹಿಂದೆ ತೀರಿಕೊಂಡಿದ್ದರು. ಕೌಟುಂಬಿಕ ಕಲಹದಲ್ಲಿ ತಂದೆಯೇ ತಾಯಿಯನ್ನು ಕೊಲೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ 14 ವರ್ಷಗಳ ಹಿಂದೆ ತಂದೆ ಶಿವನಂಜಯ್ಯ ಸಹ ಕುಡಿತದಿಂದ ಸಾವನ್ನಪ್ಪಿದ್ದರು. ಘಟನೆಯಿಂದ ಬೇಸತ್ತಿದ್ದ ಯುವಕ ತಾಯಿ ಸಾವನ್ನಪ್ಪಿದ ದಿನವೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು ಬಳಿಕ ಸ್ನೇಹಿತರ ನೆರವಿನಿಂದ ಬಚಾವಾಗಿದ್ದ. ಆನಂತರ ತಂದೆ ಸಾವನ್ನಪ್ಪಿದ ದಿನವೂ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ, ಸಾವಿನಿಂದ ಬಚಾವಾಗಿದ್ದ. ಆದರೆ, ಮೂರನೇ ಬಾರಿಯ ಯತ್ನದಲ್ಲಿ ಪ್ರಾಣ ಪಕ್ಷಿಯೇ ಹೋಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-year-old man Commits suicide in Mysore on his Birthday with a death note. The deceased has been identified as Karthik (30).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm