ಬ್ರೇಕಿಂಗ್ ನ್ಯೂಸ್
25-06-21 04:43 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25: ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ನನಗೆ ಇನ್ನೂ ಆ ಸ್ಥಿತಿ ಬಂದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರು ಮಠಕ್ಕೆ ಭೇಟಿಯಿತ್ತ ಜಾರಕಿಹೊಳಿ, ಬಳಿಕ ಹೊರಬಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ಸ್ವಾಮೀಜಿ ಬಳಿಗೆ ಅವರ ಮಾತೃಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕೀಯವನ್ನೂ ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನ ಸಚಿವನನ್ನಾಗಿ ಮಾಡುವ ಶಕ್ತಿ ಇರುವ ನಾನು, ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ. ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ಬಿಟ್ಟು ಬಿಡಿ. ನಾನು ಅಲ್ಲಿಯವರೆಗು ಏನೂ ಮಾತಾಡಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಜಾರಕಿಹೊಳಿ ಒತ್ತಿ ಹೇಳಿದರು.
ರಾಜೀನಾಮೆ ಕೊಟ್ಟರು ನಾನೊಬ್ಬನೇ ಕೊಡ್ತೇನೆ. ಹಾಗೆಂದು ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡೋದಿಲ್ಲ. ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವಿಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನ ಹೇಳಿಕೊಂಡಿದ್ದೇನೆ. ಅದಕ್ಕಾಗಿ ಮುಂಬೈಗೆ ಹೋಗಿದ್ದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆಯು ಅವರ ನೇತೃತ್ವದಲ್ಲೇ ನಡೆಯಲಿದೆ. ಆನಂತರ ನಾವು ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
Ramesh Jarkiholi left for Mysuru in his private aircraft from the Sambra airport in Belagavi on Friday. Later, he is expected to head to Bengaluru to meet Chief Minister B.S. Yediyurappa.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm