ಬ್ರೇಕಿಂಗ್ ನ್ಯೂಸ್
25-06-21 04:43 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25: ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ನನಗೆ ಇನ್ನೂ ಆ ಸ್ಥಿತಿ ಬಂದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರು ಮಠಕ್ಕೆ ಭೇಟಿಯಿತ್ತ ಜಾರಕಿಹೊಳಿ, ಬಳಿಕ ಹೊರಬಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ಸ್ವಾಮೀಜಿ ಬಳಿಗೆ ಅವರ ಮಾತೃಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕೀಯವನ್ನೂ ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನ ಸಚಿವನನ್ನಾಗಿ ಮಾಡುವ ಶಕ್ತಿ ಇರುವ ನಾನು, ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ. ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ಬಿಟ್ಟು ಬಿಡಿ. ನಾನು ಅಲ್ಲಿಯವರೆಗು ಏನೂ ಮಾತಾಡಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಜಾರಕಿಹೊಳಿ ಒತ್ತಿ ಹೇಳಿದರು.
ರಾಜೀನಾಮೆ ಕೊಟ್ಟರು ನಾನೊಬ್ಬನೇ ಕೊಡ್ತೇನೆ. ಹಾಗೆಂದು ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡೋದಿಲ್ಲ. ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವಿಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನ ಹೇಳಿಕೊಂಡಿದ್ದೇನೆ. ಅದಕ್ಕಾಗಿ ಮುಂಬೈಗೆ ಹೋಗಿದ್ದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆಯು ಅವರ ನೇತೃತ್ವದಲ್ಲೇ ನಡೆಯಲಿದೆ. ಆನಂತರ ನಾವು ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
Ramesh Jarkiholi left for Mysuru in his private aircraft from the Sambra airport in Belagavi on Friday. Later, he is expected to head to Bengaluru to meet Chief Minister B.S. Yediyurappa.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm