ಬ್ರೇಕಿಂಗ್ ನ್ಯೂಸ್
27-06-21 12:42 pm Mangaluru Correspondent ಕರ್ನಾಟಕ
ಹೊನ್ನಾವರ, ಜೂ.26: ಕಾಸರಕೋಡು ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿ ಬಂದರಿಗೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಮೀನುಗಾರರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶಗೊಂಡು ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಕಾಸರಕೋಡು ಟೊಂಕಾ ಭಾಗದ ಶರಾವತಿ ನದಿ ಅಳಿವೆ ಪ್ರದೇಶದಲ್ಲಿ ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ಹೊನ್ನಾವರ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ವಾಣಿಜ್ಯ ಬಂದರು ನಿರ್ಮಿಸುತ್ತಿದೆ. ಸರಕಾರ ವಾಣಿಜ್ಯ ಬಂದರು ನಿರ್ಮಾಣಕ್ಕೆ 93 ಎಕರೆ ಜಾಗವನ್ನು ಮಂಜೂರಿ ಮಾಡಿದೆ. ಕೆಲ ತಿಂಗಳ ಹಿಂದೆ ಕಾಮಗಾರಿ ಪ್ರಾರಂಭಿಸಿದ್ದ ಕಂಪೆನಿ ಸ್ಥಳೀಯರ ವಿರೋಧದಿಂದ ಸ್ಥಗಿತಗೊಳಿಸಿತ್ತು. ಆದರೆ, ಬೆಳ್ಳಂಬೆಳಗ್ಗೆ ಮತ್ತೆ ಸಾವಿರಾರು ಪೊಲೀಸರ ಭದ್ರತೆಯಲ್ಲಿ ಕಾಮಗಾರಿ ನಡೆಸಲು ಮುಂದಾಯಿತು.

ಶನಿವಾರ 500ಕ್ಕೂ ಹೆಚ್ಚು ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ಮೂರು ಜೆಸಿಬಿಗಳ ಮೂಲಕ ಕಾರ್ಯಾಚರಣೆಗೆ ಇಳಿದ ಕಂಪೆನಿ, ಮೀನುಗಾರರ ಹತ್ತಾರು ಶೆಡ್ಗಳನ್ನು ಉರುಳಿಸಿದೆ. ಅದಲ್ಲದೆ, ಕಡಲ ತೀರದಂಚಿನ ಮರಗಳು, ತೆಂಗಿನ ಮರಗಳನ್ನು ನಾಶ ಮಾಡಿದೆ ಎಂದು ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ಆರಂಭಿಸಿದರು.
ಈ ವೇಳೆ ಮೀನುಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಮತ್ತು ತಳ್ಳಾಟ ನಡೆಯಿತು. ಕೆಲ ಯುವಕರು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಮುಂದಾದರು. ತಕ್ಷಣ ಪೊಲೀಸರು, ಕರಾವಳಿ ಕಾವಲು ಪಡೆ ಸಿಬ್ಬಂದಿ ಧಾವಿಸಿ ಯುವಕರನ್ನು ಸಮುದ್ರದಿಂದ ಮೇಲಕ್ಕೆ ಕರೆತಂದಿದ್ದಾರೆ. ಪ್ರತಿಭಟನಾ ನಿರತ ಮೀನುಗಾರರು, ಮಹಿಳೆಯರನ್ನು ಪೊಲೀಸರ ಸಹಾಯದಿಂದ ಚದುರಿಸ ಲಾಯಿತು.
ಯಾವುದೇ ಮುನ್ಸೂಚನೆ ನೀಡದೇ ಬದುಕು ಕಟ್ಟಿಕೊಂಡಿದ್ದ ಶೆಡ್ ಗಳನ್ನು ಉರುಳಿಸುತ್ತಿದ್ದಾರೆ. ಬಡವರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ತಮ್ಮ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಮೀನುಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾಸರಕೋಡು, ಮಲ್ಲುಕುರ್ವಾ ಪ್ರದೇಶದಲ್ಲಿ ಸುಮಾರು 600ಕ್ಕೂ ಹೆಚ್ಚು ಕುಟುಂಬಗಳು ಮೀನುಗಾರಿಕೆಯನ್ನು ನಂಬಿ ಬದುಕುತ್ತಿವೆ. ಸರಕಾರ ಸ್ಥಳೀಯರಿಗೆ ಸ್ಪಷ್ಟ ಮಾಹಿತಿ ನೀಡದೆ ಕಾಮಗಾರಿ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ನೆಪದಲ್ಲಿ ಮೀನುಗಾರರನ್ನು ಸಂಪೂರ್ಣ ಒಕ್ಕಲೆಬ್ಬಿಸುವ ಹುನ್ನಾರ ನಡೆಸಲಾಗಿದೆ. ಆದ್ದರಿಂದ ಕೂಡಲೇ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.
ಈ ಬಗ್ಗೆ ಉಪ ವಿಭಾಗಾಧಿಕಾರಿ ಮಮತಾ ದೇವಿ ಪ್ರತಿಕ್ರಿಯಿಸಿ, ಕಾಮಗಾರಿ ಬಗ್ಗೆ ಈ ಮೊದಲೇ ಸ್ಥಳೀಯ ಮೀನುಗಾರರೊಂದಿಗೆ ಸಭೆ ನಡೆಸಿ ತಿರ್ಮಾನ ಕೈಗೊಳ್ಳಲಾಗಿದೆ. ಜನರು ಮೊದಲಿನಿಂದಲೂ ವಾಸಿಸುತ್ತಿರುವ ಕಾರಣ ಸಹಜವಾಗಿ ಆತಂಕ ಇದೆ. ಆದರೆ, ಈಗಾಗಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಇಂದು ಕೇವಲ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಮಾತ್ರ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
Construction of a Private commercial port in Honnavar, fishermen oppose by protesting the construction of the port, Fishermen attempt to mass suicide to stop the work. Hundreds of police personnel were gathered.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm