ಬ್ರೇಕಿಂಗ್ ನ್ಯೂಸ್
01-07-21 03:17 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 1: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 130 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
‘ವರಿಷ್ಠರು ಸೂಚಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುವೆ’ ಎಂದು ತಿಂಗಳ ಹಿಂದಷ್ಟೇ ಹೇಳಿದ್ದ ಯಡಿಯೂರಪ್ಪ, ಈಗ ತದ್ವಿರುದ್ಧ ರೀತಿಯ ಹೇಳಿಕೆ ಕೊಟ್ಟು ಅಚ್ಚರಿ ಸೃಷ್ಟಿಸಿದ್ದಾರೆ. ಇನ್ನೂ ಉತ್ತಮ ಕೆಲಸಗಳನ್ನು ಎರಡು ವರ್ಷಗಳಲ್ಲಿ ಮಾಡಬೇಕಾಗಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಲುವಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನವನ್ನು ಮಾಡುತ್ತೇನೆ ಎಂದು ಕಾರ್ಯಕರ್ತರಿಗೆ ಮತ್ತು ರಾಜ್ಯದ ಜನರಿಗೆ ಭರವಸೆ ನೀಡುತ್ತೇನೆ ಎಂದು ದಿಢೀರ್ ಹೇಳಿಕೆ ನೀಡಿರುವುದು ಜಿಜ್ಞಾಸೆಗೆ ಗ್ರಾಸವಾಗಿದೆ.
ರಾಜಭವನಕ್ಕೆ ಬುಧವಾರ ಸಂಜೆ ಭೇಟಿ ನೀಡಿದ್ದ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಲ್ಲಿಂದ ಹಿಂತಿರುಗುವ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.

ನಾಯಕತ್ವ ಬದಲಾವಣೆ ವಿಚಾರದಲ್ಲಿ ‘ಪರೀಕ್ಷೆ ಬರೆದಿದ್ದು, ಫಲಿತಾಂಶವಷ್ಟೇ ಬಾಕಿ’ ಎಂದು ಯಡಿಯೂರಪ್ಪ ವಿರೋಧಿ ಬಣದಲ್ಲಿರುವ ಸಚಿವ ಸಿ.ಪಿ. ಯೋಗೇಶ್ವರ್ ಹೇಳುತ್ತಲೇ ಬಂದಿದ್ದಾರೆ. ಇದರ ಮಧ್ಯೆಯೇ, ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ ಎಂದು ಅವರ ಮಗ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಯಡಿಯೂರಪ್ಪ, ಮುಂದಿನ ಚುನಾವಣೆಯ ನಾಯಕತ್ವವೂ ತಮ್ಮದೇ ಎಂದು ಪರೋಕ್ಷವಾಗಿ ಹೇಳಿರುವುದು ನಾನಾ ರೀತಿಯ ವಿಶ್ಲೇಷಣೆಗೂ ಕಾರಣವಾಗಿದೆ. ಹೀಗೆ ಹೇಳುವ ಮೂಲಕ ‘ಮುಖ್ಯಮಂತ್ರಿ ಸ್ಥಾನದಿಂದ ತಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ಅವರು ವರಿಷ್ಠರಿಗೆ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯದಲ್ಲಿ ಗೊಂದಲ ಮುಂದುವರಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸುತ್ತಾ ಮುಂದೆ ನಡೆದರು.
Karnataka Chief Minister B S Yediyurappa on Wednesday made an unscheduled visit to Raj Bhavan and met Vajubhai R Vala, after which he said he would work towards bringing the BJP back to power with 130 seats in the next election.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm