ಬ್ರೇಕಿಂಗ್ ನ್ಯೂಸ್
02-07-21 12:59 pm Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಜುಲೈ 02; : ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
12 ವರ್ಷದ ಬಾಲಕ ನೇಣಿಗೆ ಶರಣಾಗಿರುವುದನ್ನು ನೆರೆಮನೆಯವರು ನೋಡಿ ಅವರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಲಾರಿ ಚಾಲಕನಾಗಿರುವ ಸಿದ್ದರಾಜು ಅವರ ಮಗ ಪುನೀತ್(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆತನ ತಾಯಿ ಮನೆಗೆಲಸ ಮಾಡುತ್ತಾರೆ. ವಿಷಯ ಕೇಳಿ ಸ್ಥಳಕ್ಕೆ ಬಂದ ಆಕೆ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು.

ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುನೀತ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನದ ವರೆಗೆ 4ನೇ ತರಗತಿ ಓದುತ್ತಿದ್ದ ತನ್ನ ಸಹೋದರನ ಜೊತೆ ಆಟವಾಡುತ್ತಿದ್ದ.
ಆಟವಾಡುತ್ತಿದ್ದವನು ಇದ್ದಕ್ಕಿದ್ದ ಹಾಗೆ ತಾನು ಸಾಯುವುದಾಗಿ ಹೇಳಿ ಮೊದಲ ಮಹಡಿಯಲ್ಲಿದ್ದ ತನ್ನ ಮನೆಯ ರೂಮಿಗೆ ಹೋಗಿ ನೇಣು ಹಾಕಿಕೊಂಡ. ಆತ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಸ್ನೇಹಿತನೊಬ್ಬ ಕಾರಣ ಎಂದು ಬರೆದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಬಾಲಕನ ಸಾವಿಗೆ ಅದೇ ಸ್ಥಳದಲ್ಲಿರುವ ಮತ್ತೊಬ್ಬ ಬಾಲಕ ಕಾರಣ ಎಂದು ತಿಳಿದು ಬಂದಿದೆ, ಆದರೆ ಇಬ್ಬರು ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಬಾಲಕನ ಕೈ ಬರಹದ ಬಗ್ಗೆ ಅನುಮಾನವಿದೆ ಎಂದು ಆತನ ತಂದೆ ತಿಳಿಸಿದ್ದಾರೆ. ಅದು ಪುನೀತ್ ಕೈ ಬರಹವಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Bangalore Sixt std student commits suicide at his residence death note found. In the death note, he has alleged his friend as the main reason for his death.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm