ಬ್ರೇಕಿಂಗ್ ನ್ಯೂಸ್
02-07-21 12:59 pm Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಜುಲೈ 02; : ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
12 ವರ್ಷದ ಬಾಲಕ ನೇಣಿಗೆ ಶರಣಾಗಿರುವುದನ್ನು ನೆರೆಮನೆಯವರು ನೋಡಿ ಅವರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಲಾರಿ ಚಾಲಕನಾಗಿರುವ ಸಿದ್ದರಾಜು ಅವರ ಮಗ ಪುನೀತ್(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆತನ ತಾಯಿ ಮನೆಗೆಲಸ ಮಾಡುತ್ತಾರೆ. ವಿಷಯ ಕೇಳಿ ಸ್ಥಳಕ್ಕೆ ಬಂದ ಆಕೆ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು.

ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುನೀತ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನದ ವರೆಗೆ 4ನೇ ತರಗತಿ ಓದುತ್ತಿದ್ದ ತನ್ನ ಸಹೋದರನ ಜೊತೆ ಆಟವಾಡುತ್ತಿದ್ದ.
ಆಟವಾಡುತ್ತಿದ್ದವನು ಇದ್ದಕ್ಕಿದ್ದ ಹಾಗೆ ತಾನು ಸಾಯುವುದಾಗಿ ಹೇಳಿ ಮೊದಲ ಮಹಡಿಯಲ್ಲಿದ್ದ ತನ್ನ ಮನೆಯ ರೂಮಿಗೆ ಹೋಗಿ ನೇಣು ಹಾಕಿಕೊಂಡ. ಆತ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಸ್ನೇಹಿತನೊಬ್ಬ ಕಾರಣ ಎಂದು ಬರೆದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಬಾಲಕನ ಸಾವಿಗೆ ಅದೇ ಸ್ಥಳದಲ್ಲಿರುವ ಮತ್ತೊಬ್ಬ ಬಾಲಕ ಕಾರಣ ಎಂದು ತಿಳಿದು ಬಂದಿದೆ, ಆದರೆ ಇಬ್ಬರು ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಬಾಲಕನ ಕೈ ಬರಹದ ಬಗ್ಗೆ ಅನುಮಾನವಿದೆ ಎಂದು ಆತನ ತಂದೆ ತಿಳಿಸಿದ್ದಾರೆ. ಅದು ಪುನೀತ್ ಕೈ ಬರಹವಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Bangalore Sixt std student commits suicide at his residence death note found. In the death note, he has alleged his friend as the main reason for his death.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm