ಬ್ರೇಕಿಂಗ್ ನ್ಯೂಸ್
02-07-21 12:59 pm Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಜುಲೈ 02; : ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
12 ವರ್ಷದ ಬಾಲಕ ನೇಣಿಗೆ ಶರಣಾಗಿರುವುದನ್ನು ನೆರೆಮನೆಯವರು ನೋಡಿ ಅವರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಲಾರಿ ಚಾಲಕನಾಗಿರುವ ಸಿದ್ದರಾಜು ಅವರ ಮಗ ಪುನೀತ್(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆತನ ತಾಯಿ ಮನೆಗೆಲಸ ಮಾಡುತ್ತಾರೆ. ವಿಷಯ ಕೇಳಿ ಸ್ಥಳಕ್ಕೆ ಬಂದ ಆಕೆ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು.

ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುನೀತ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನದ ವರೆಗೆ 4ನೇ ತರಗತಿ ಓದುತ್ತಿದ್ದ ತನ್ನ ಸಹೋದರನ ಜೊತೆ ಆಟವಾಡುತ್ತಿದ್ದ.
ಆಟವಾಡುತ್ತಿದ್ದವನು ಇದ್ದಕ್ಕಿದ್ದ ಹಾಗೆ ತಾನು ಸಾಯುವುದಾಗಿ ಹೇಳಿ ಮೊದಲ ಮಹಡಿಯಲ್ಲಿದ್ದ ತನ್ನ ಮನೆಯ ರೂಮಿಗೆ ಹೋಗಿ ನೇಣು ಹಾಕಿಕೊಂಡ. ಆತ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಸ್ನೇಹಿತನೊಬ್ಬ ಕಾರಣ ಎಂದು ಬರೆದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಬಾಲಕನ ಸಾವಿಗೆ ಅದೇ ಸ್ಥಳದಲ್ಲಿರುವ ಮತ್ತೊಬ್ಬ ಬಾಲಕ ಕಾರಣ ಎಂದು ತಿಳಿದು ಬಂದಿದೆ, ಆದರೆ ಇಬ್ಬರು ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಬಾಲಕನ ಕೈ ಬರಹದ ಬಗ್ಗೆ ಅನುಮಾನವಿದೆ ಎಂದು ಆತನ ತಂದೆ ತಿಳಿಸಿದ್ದಾರೆ. ಅದು ಪುನೀತ್ ಕೈ ಬರಹವಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Bangalore Sixt std student commits suicide at his residence death note found. In the death note, he has alleged his friend as the main reason for his death.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm