ಬ್ರೇಕಿಂಗ್ ನ್ಯೂಸ್
02-07-21 12:59 pm Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಜುಲೈ 02; : ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
12 ವರ್ಷದ ಬಾಲಕ ನೇಣಿಗೆ ಶರಣಾಗಿರುವುದನ್ನು ನೆರೆಮನೆಯವರು ನೋಡಿ ಅವರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಲಾರಿ ಚಾಲಕನಾಗಿರುವ ಸಿದ್ದರಾಜು ಅವರ ಮಗ ಪುನೀತ್(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆತನ ತಾಯಿ ಮನೆಗೆಲಸ ಮಾಡುತ್ತಾರೆ. ವಿಷಯ ಕೇಳಿ ಸ್ಥಳಕ್ಕೆ ಬಂದ ಆಕೆ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು.

ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುನೀತ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನದ ವರೆಗೆ 4ನೇ ತರಗತಿ ಓದುತ್ತಿದ್ದ ತನ್ನ ಸಹೋದರನ ಜೊತೆ ಆಟವಾಡುತ್ತಿದ್ದ.
ಆಟವಾಡುತ್ತಿದ್ದವನು ಇದ್ದಕ್ಕಿದ್ದ ಹಾಗೆ ತಾನು ಸಾಯುವುದಾಗಿ ಹೇಳಿ ಮೊದಲ ಮಹಡಿಯಲ್ಲಿದ್ದ ತನ್ನ ಮನೆಯ ರೂಮಿಗೆ ಹೋಗಿ ನೇಣು ಹಾಕಿಕೊಂಡ. ಆತ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಸ್ನೇಹಿತನೊಬ್ಬ ಕಾರಣ ಎಂದು ಬರೆದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಬಾಲಕನ ಸಾವಿಗೆ ಅದೇ ಸ್ಥಳದಲ್ಲಿರುವ ಮತ್ತೊಬ್ಬ ಬಾಲಕ ಕಾರಣ ಎಂದು ತಿಳಿದು ಬಂದಿದೆ, ಆದರೆ ಇಬ್ಬರು ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಬಾಲಕನ ಕೈ ಬರಹದ ಬಗ್ಗೆ ಅನುಮಾನವಿದೆ ಎಂದು ಆತನ ತಂದೆ ತಿಳಿಸಿದ್ದಾರೆ. ಅದು ಪುನೀತ್ ಕೈ ಬರಹವಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Bangalore Sixt std student commits suicide at his residence death note found. In the death note, he has alleged his friend as the main reason for his death.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm